<p><strong>ಬೆಂಗಳೂರು</strong>: ಕೆಎಸ್ಆರ್ಪಿ ಹಾಗೂ ಐಆರ್ಬಿ ಕಾನ್ಸ್ಟೆಬಲ್ ಹುದ್ದೆಗಳ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನದಿಂದ ನಕಲು ಮಾಡುತ್ತಿದ್ದ ಹಾಗೂ ನಕಲಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯುತ್ತಿದ್ದ ಮೂವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿದ್ದ ಜಮಖಂಡಿಯ ಹನುಮಂತಪ್ಪ ಗಂಗಪ್ಪ ಬಿಲ್ಲೂರು ಹಾಗೂ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಗೋಕಾಕ್ನ ಗುರುನಾಥ್ ವಡ್ಡರ್, ಮಹಾಂತೇಶ್ ನಂದಿ ಬಂಧಿತರು.</p>.<p>‘ಇಂದಿರಾನಗರದ ಕೆಎಸ್ಇಇ ಶಾಲೆಯಲ್ಲಿ ನಡೆದ ಕೆಎಸ್ಆರ್ಪಿ ಪರೀಕ್ಷೆ ವೇಳೆ ಹನುಮಂತಪ್ಪ ಬೇರೊಬ್ಬರೊಂದಿಗೆ ಮಾತನಾಡುತ್ತಿರುವುದು ಮೇಲ್ವಿಚಾರಕ ಗಮನಕ್ಕೆಬಂದು, ಪರಿಶೀಲಿಸಿದಾಗ ಕಿವಿಯಲ್ಲಿ ಬ್ಲೂಟೂತ್ ಪತ್ತೆಯಾಗಿದೆ. ಬೇರೊಬ್ಬರಿಂದ ಉತ್ತರಗಳನ್ನು ನಕಲು ಮಾಡುತ್ತಿರುವುದು ಪತ್ತೆಯಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಇದೇ ಪರೀಕ್ಷಾ ಕೇಂದ್ರದಲ್ಲಿ ಗುರುನಾಥ್ ವಡ್ಡರ್ ಎಂಬಾತ ಸಾಗರ್ ವಡ್ಡರ್ ಅಭ್ಯರ್ಥಿ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ. ಹಣಕ್ಕಾಗಿ ಅಭ್ಯರ್ಥಿಗಳ ಪರ ಪರೀಕ್ಷೆ ಬರೆದಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’.</p>.<p>‘ಜೀವನ್ ಬಿಮಾನಗರದ ಸೇಕ್ರೆಡ್ ಹಾರ್ಟ್ ಹೈಸ್ಕೂಲ್ನ ಪರೀಕ್ಷಾ ಕೇಂದ್ರದಲ್ಲಿ ಸಿದ್ಧಾರೂಢ ಬಣಜ್ ಹೆಸರಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಹಾಂತೇಶ್ ನಂದಿಯನ್ನೂ ಬಂಧಿಸ ಲಾಗಿದೆ. ಈ ಸಂಬಂಧ ಜೀವನ್ಬಿಮಾ ನಗರದಲ್ಲಿ ಒಂದು ಹಾಗೂ ಇಂದಿರಾನಗರ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕಲಿ ಅಭ್ಯರ್ಥಿಗಳಾಗಿ ಪರೀಕ್ಷೆಗೆ ಹಾಜರಾಗಿದ್ದ ಕಾನ್ಸ್ಟೆಬಲ್ ಸೇರಿದಂತೆ ಇಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಎಸ್ಆರ್ಪಿ ಹಾಗೂ ಐಆರ್ಬಿ ಕಾನ್ಸ್ಟೆಬಲ್ ಹುದ್ದೆಗಳ ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನದಿಂದ ನಕಲು ಮಾಡುತ್ತಿದ್ದ ಹಾಗೂ ನಕಲಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆಯುತ್ತಿದ್ದ ಮೂವರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಪರೀಕ್ಷೆಯಲ್ಲಿ ಬ್ಲೂಟೂತ್ ಸಾಧನ ಬಳಸಿದ್ದ ಜಮಖಂಡಿಯ ಹನುಮಂತಪ್ಪ ಗಂಗಪ್ಪ ಬಿಲ್ಲೂರು ಹಾಗೂ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಗೋಕಾಕ್ನ ಗುರುನಾಥ್ ವಡ್ಡರ್, ಮಹಾಂತೇಶ್ ನಂದಿ ಬಂಧಿತರು.</p>.<p>‘ಇಂದಿರಾನಗರದ ಕೆಎಸ್ಇಇ ಶಾಲೆಯಲ್ಲಿ ನಡೆದ ಕೆಎಸ್ಆರ್ಪಿ ಪರೀಕ್ಷೆ ವೇಳೆ ಹನುಮಂತಪ್ಪ ಬೇರೊಬ್ಬರೊಂದಿಗೆ ಮಾತನಾಡುತ್ತಿರುವುದು ಮೇಲ್ವಿಚಾರಕ ಗಮನಕ್ಕೆಬಂದು, ಪರಿಶೀಲಿಸಿದಾಗ ಕಿವಿಯಲ್ಲಿ ಬ್ಲೂಟೂತ್ ಪತ್ತೆಯಾಗಿದೆ. ಬೇರೊಬ್ಬರಿಂದ ಉತ್ತರಗಳನ್ನು ನಕಲು ಮಾಡುತ್ತಿರುವುದು ಪತ್ತೆಯಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಇದೇ ಪರೀಕ್ಷಾ ಕೇಂದ್ರದಲ್ಲಿ ಗುರುನಾಥ್ ವಡ್ಡರ್ ಎಂಬಾತ ಸಾಗರ್ ವಡ್ಡರ್ ಅಭ್ಯರ್ಥಿ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ. ಹಣಕ್ಕಾಗಿ ಅಭ್ಯರ್ಥಿಗಳ ಪರ ಪರೀಕ್ಷೆ ಬರೆದಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’.</p>.<p>‘ಜೀವನ್ ಬಿಮಾನಗರದ ಸೇಕ್ರೆಡ್ ಹಾರ್ಟ್ ಹೈಸ್ಕೂಲ್ನ ಪರೀಕ್ಷಾ ಕೇಂದ್ರದಲ್ಲಿ ಸಿದ್ಧಾರೂಢ ಬಣಜ್ ಹೆಸರಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಹಾಂತೇಶ್ ನಂದಿಯನ್ನೂ ಬಂಧಿಸ ಲಾಗಿದೆ. ಈ ಸಂಬಂಧ ಜೀವನ್ಬಿಮಾ ನಗರದಲ್ಲಿ ಒಂದು ಹಾಗೂ ಇಂದಿರಾನಗರ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಕಲಿ ಅಭ್ಯರ್ಥಿಗಳಾಗಿ ಪರೀಕ್ಷೆಗೆ ಹಾಜರಾಗಿದ್ದ ಕಾನ್ಸ್ಟೆಬಲ್ ಸೇರಿದಂತೆ ಇಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>