'ಸೋನುಕುಮಾರ್, ಸುನಿಲ್ ಹಾಗೂ ಇರ್ಫಾನ್ ಬಿಹಾರದಿಂದ ಪಿಸ್ತೂಲ್ ಖರೀದಿಸಿ, ಬೆಂಗಳೂರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದರು. ಆಂಧ್ರಪ್ರದೇಶದ ಮದನಪಲ್ಲಿಯ ಮುರುಳಿ ಇವರಿಂದ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಖರೀದಿಸಿ ಅಕ್ರಮವಾಗಿ ಇಟ್ಟುಕೊಂಡಿದ್ದ. ಹಾಗಾಗಿ, ನಾಲ್ವರನ್ನೂ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಇನ್ನೊಬ್ಬ ಆರೋಪಿಯ ಪತ್ತೆಕಾರ್ಯ ಮುಂದುವರಿದಿದೆ' ಎಂದೂ ಹೇಳಿದರು.