ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನ ಸುಲಿಗೆ, ಮೂವರ ಬಂಧನ

Published 22 ಸೆಪ್ಟೆಂಬರ್ 2023, 15:26 IST
Last Updated 22 ಸೆಪ್ಟೆಂಬರ್ 2023, 15:26 IST
ಅಕ್ಷರ ಗಾತ್ರ

ಬೆಂಗಳೂರು: ಕುಡಿಯುವ ನೀರು ಕೇಳುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ವಿಜಯ್‌ಕುಮಾರ್ ಅಲಿಯಾಸ್ ಡಿಯೊ ಪುಟ್ಟ, ಚಿರಾಗ್ ಗೌಡ ಅಲಿಯಾಸ್ ರಿಚಿ ಹಾಗೂ ರವಿಕುಮಾರ್ ಬಂಧಿತರು. ಇವರಿಂದ 15 ಗ್ರಾಂ ತೂಕದ ಚಿನ್ನದ ಸರ, 3 ಮೊಬೈಲ್ ಹಾಗೂ ಡ್ಯಾಗರ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ಇತ್ತೀಚೆಗೆ ನುಗ್ಗಿದ್ದ ಆರೋಪಿಗಳು, ಮಹಿಳೆಗೆ ಡ್ಯಾಗರ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಸುಲಿಗೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.

‘ಮೂವರು ಆರೋಪಿಗಳು ಅಪರಾಧ ಹಿನ್ನೆಲೆಯುಳ್ಳವರು. ಮತ್ತಷ್ಟು ಕಡೆ ಸುಲಿಗೆ ಮಾಡಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT