<figcaption>""</figcaption>.<p><strong>ಬೆಂಗಳೂರು:</strong> ಹೆಲ್ಮೆಟ್ ಧರಿಸುವುದರಿಂದ ಕೊರೊನಾ ಸೋಂಕು ಹರಡುವ ಭಯವಿದ್ದು, ಸೋಂಕಿತರ ಸಂಖ್ಯೆ ಕಡಿಮೆ ಆಗುವವರೆಗೂ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುವಂತೆ ಸಂಜಯ್ ಎಂಬುವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಟ್ವೀಟ್ ಮಾಡಿದ್ದಾರೆ.</p>.<p>‘ಜನರು ತಮ್ಮ ಹೆಲ್ಮೆಟ್ಗಳನ್ನು ತೆಗೆದು ಸಾರ್ವಜನಿಕ ಸ್ಥಳ, ಟೇಬಲ್, ಕುರ್ಚಿ, ಇತರ ವಸ್ತುಗಳ ಮೇಲೆ ಇಡುತ್ತಿದ್ದಾರೆ. ಸಾಮಾನ್ಯವಾಗಿ ಹೆಲ್ಮೆಟ್ಗಳನ್ನೂ ಯಾರೂ ಸ್ವಚ್ಛಗೊಳಿಸುವುದಿಲ್ಲ. ಸೋಂಕಿತ ವ್ಯಕ್ತಿ ಕೂಡ ಹೆಲ್ಮೆಟ್ ಬಳಕೆ ಮಾಡುತ್ತಾರೆ. ಆ ಹೆಲ್ಮೆಟ್ ಈ ರೀತಿ ಎಲ್ಲೆಂದರಲ್ಲಿ ಇಟ್ಟರೆ ಸೋಂಕು ಹರಡುವಿಕೆ ಸಾಧ್ಯತೆ ಹೆಚ್ಚು. ಹೀಗಾಗಿ, ದ್ವಿಚಕ್ರ ವಾಹನ ಸವಾರರಿಗೆ ಸದ್ಯಕ್ಕೆ ಹೆಲ್ಮೆಟ್ನಿಂದ ವಿನಾಯಿತಿ ನೀಡಿ’ ಎಂದು ಟ್ವೀಟ್ನಲ್ಲಿ ಸಂಜಯ್ ಕೋರಿದ್ದಾರೆ.</p>.<p>ಅದಕ್ಕೆ ಪ್ರತಿಕ್ರಿಯಿಸಿರುವ ಭಾಸ್ಕರ್ ರಾವ್, ‘ಹೆಲ್ಮೆಟ್ ಕಡ್ಡಾಯ ನಿಯಮ ಪ್ರಾಣಾಪಾಯ ತಪ್ಪಿಸುವ ಕ್ರಮವೇ ಹೊರತು ಸಾರ್ವಜನಿಕರ ಮೇಲೆ ಹೇರಿರುವ ಶಿಕ್ಷೆಯಲ್ಲ. ನೀವು ಹೆಲ್ಮೆಟ್ ಧರಿಸದಿದ್ದರೆ ಅದು ನಿಮ್ಮ ಕುಟುಂಬಕ್ಕೆ ಮಾಡುವ ಅನ್ಯಾಯವಾಗುತ್ತದೆ’ ಎಂದಿದ್ದಾರೆ.</p>.<p>‘ನಿತ್ಯವೂ ಅಪಘಾತ ಸಂಭವಿಸುತ್ತಿರುವುದನ್ನು ನಾವು–ನೀವು ನೋಡುತ್ತಿರುತ್ತೇವೆ. ಹೆಲ್ಮೆಟ್ ಧರಿಸುವ ಮೂಲಕ ನಿಮ್ಮನ್ನು ಮತ್ತು ಕುಟುಂಬವನ್ನು ಸುರಕ್ಷಿತವಾಗಿರಿಸಿಕೊಳ್ಳಿ’ ಎಂದೂ ಅವರು ಸಲಹೆ ನೀಡಿದ್ದಾರೆ.</p>.<p>ಈ ಪ್ರತಿಕ್ರಿಯೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಹೆಲ್ಮೆಟ್ ಧರಿಸುವುದರಿಂದ ಕೊರೊನಾ ಸೋಂಕು ಹರಡುವ ಭಯವಿದ್ದು, ಸೋಂಕಿತರ ಸಂಖ್ಯೆ ಕಡಿಮೆ ಆಗುವವರೆಗೂ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುವಂತೆ ಸಂಜಯ್ ಎಂಬುವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಟ್ವೀಟ್ ಮಾಡಿದ್ದಾರೆ.</p>.<p>‘ಜನರು ತಮ್ಮ ಹೆಲ್ಮೆಟ್ಗಳನ್ನು ತೆಗೆದು ಸಾರ್ವಜನಿಕ ಸ್ಥಳ, ಟೇಬಲ್, ಕುರ್ಚಿ, ಇತರ ವಸ್ತುಗಳ ಮೇಲೆ ಇಡುತ್ತಿದ್ದಾರೆ. ಸಾಮಾನ್ಯವಾಗಿ ಹೆಲ್ಮೆಟ್ಗಳನ್ನೂ ಯಾರೂ ಸ್ವಚ್ಛಗೊಳಿಸುವುದಿಲ್ಲ. ಸೋಂಕಿತ ವ್ಯಕ್ತಿ ಕೂಡ ಹೆಲ್ಮೆಟ್ ಬಳಕೆ ಮಾಡುತ್ತಾರೆ. ಆ ಹೆಲ್ಮೆಟ್ ಈ ರೀತಿ ಎಲ್ಲೆಂದರಲ್ಲಿ ಇಟ್ಟರೆ ಸೋಂಕು ಹರಡುವಿಕೆ ಸಾಧ್ಯತೆ ಹೆಚ್ಚು. ಹೀಗಾಗಿ, ದ್ವಿಚಕ್ರ ವಾಹನ ಸವಾರರಿಗೆ ಸದ್ಯಕ್ಕೆ ಹೆಲ್ಮೆಟ್ನಿಂದ ವಿನಾಯಿತಿ ನೀಡಿ’ ಎಂದು ಟ್ವೀಟ್ನಲ್ಲಿ ಸಂಜಯ್ ಕೋರಿದ್ದಾರೆ.</p>.<p>ಅದಕ್ಕೆ ಪ್ರತಿಕ್ರಿಯಿಸಿರುವ ಭಾಸ್ಕರ್ ರಾವ್, ‘ಹೆಲ್ಮೆಟ್ ಕಡ್ಡಾಯ ನಿಯಮ ಪ್ರಾಣಾಪಾಯ ತಪ್ಪಿಸುವ ಕ್ರಮವೇ ಹೊರತು ಸಾರ್ವಜನಿಕರ ಮೇಲೆ ಹೇರಿರುವ ಶಿಕ್ಷೆಯಲ್ಲ. ನೀವು ಹೆಲ್ಮೆಟ್ ಧರಿಸದಿದ್ದರೆ ಅದು ನಿಮ್ಮ ಕುಟುಂಬಕ್ಕೆ ಮಾಡುವ ಅನ್ಯಾಯವಾಗುತ್ತದೆ’ ಎಂದಿದ್ದಾರೆ.</p>.<p>‘ನಿತ್ಯವೂ ಅಪಘಾತ ಸಂಭವಿಸುತ್ತಿರುವುದನ್ನು ನಾವು–ನೀವು ನೋಡುತ್ತಿರುತ್ತೇವೆ. ಹೆಲ್ಮೆಟ್ ಧರಿಸುವ ಮೂಲಕ ನಿಮ್ಮನ್ನು ಮತ್ತು ಕುಟುಂಬವನ್ನು ಸುರಕ್ಷಿತವಾಗಿರಿಸಿಕೊಳ್ಳಿ’ ಎಂದೂ ಅವರು ಸಲಹೆ ನೀಡಿದ್ದಾರೆ.</p>.<p>ಈ ಪ್ರತಿಕ್ರಿಯೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>