ಬನಶಂಕರಿ 6ನೇ ಹಂತದ ದಾಸೇಗೌಡನ ಪಾಳ್ಯದ 100 ಅಡಿ ರಸ್ತೆಯಲ್ಲಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಸ್ತೆ ವಿಭಜಕ ನಿರ್ಮಿಸಿದ್ದಾರೆ. ಸುಮಾರು 2 ಕಿಲೋಮೀಟರ್ ದೂರದವರೆಗೆ ವಿಭಜಕ ನಿರ್ಮಾಣವಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಕೃಷ್ಣಯ್ಯ, ಹೆಡ್ಕಾನ್ಸ್ಟೇಬಲ್ಗಳಾದ ಶ್ರೀನಿವಾಸ್, ಅಶೋಕ್ ಕುಮಾರ್ ಸೇರಿ ರಸ್ತೆ ಮಧ್ಯೆ ಸಿಮೆಂಟ್ ಬ್ಲಾಕ್ಗಳನ್ನು ಇರಿಸಿದರು.