<p><strong>ಬೆಂಗಳೂರು: </strong>ರಸ್ತೆ ಅಪಘಾತಗಳಲ್ಲಿ ಇಬ್ಬರು ಪ್ರಾಣತೆತ್ತ ಘಟನೆ ನೋಡಿ ಬೇಸತ್ತ ಪೊಲೀಸರು ತಾವೇ ರಸ್ತೆ ವಿಭಜಕ ನಿರ್ಮಾಣಕ್ಕೆ ಮುಂದಾಗಿದ್ದಾರೆ.</p>.<p>ಬನಶಂಕರಿ 6ನೇ ಹಂತದ ದಾಸೇಗೌಡನ ಪಾಳ್ಯದ 100 ಅಡಿ ರಸ್ತೆಯಲ್ಲಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಸ್ತೆ ವಿಭಜಕ ನಿರ್ಮಿಸಿದ್ದಾರೆ. ಸುಮಾರು 2 ಕಿಲೋಮೀಟರ್ ದೂರದವರೆಗೆ ವಿಭಜಕ ನಿರ್ಮಾಣವಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಕೃಷ್ಣಯ್ಯ, ಹೆಡ್ಕಾನ್ಸ್ಟೇಬಲ್ಗಳಾದ ಶ್ರೀನಿವಾಸ್, ಅಶೋಕ್ ಕುಮಾರ್ ಸೇರಿ ರಸ್ತೆ ಮಧ್ಯೆ ಸಿಮೆಂಟ್ ಬ್ಲಾಕ್ಗಳನ್ನು ಇರಿಸಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ರಸ್ತೆ ನಿರ್ಮಿಸಿದೆ. ನಿರ್ಮಾಣದ ವೇಳೆ ವಿಭಜಕ ನಿರ್ಮಾಣಕ್ಕೆಂದು ತಂದ ಬ್ಲಾಕ್ಗಳನ್ನು ರಸ್ತೆಬದಿ ಹಾಕಲಾಗಿತ್ತು. ಅದನ್ನು ಬಳಸಿ ವಿಭಜಕ ನಿರ್ಮಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದರು.</p>.<p>‘ರಸ್ತೆ ವಿಭಜಕ ನಿರ್ಮಿಸುವಂತೆ ಇಲಾಖೆ ವತಿಯಿಂದ ಬಿಡಿಎಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿರಲಿಲ್ಲ. ಕೊನೆಗೆ ಹಿರಿಯ ಅಧಿಕಾರಿಗಳ ಸಲಹೆಯಂತೆ ನಾವೇ ಕೆಲಸಕ್ಕಿಳಿದಿದ್ದೇವೆ’ ಎಂದು ಕೃಷ್ಣಯ್ಯ ಹೇಳಿದರು.</p>.<p>ಸಂಜೆ ವೇಳೆ ರೇಡಿಯಲ್ ಸ್ಟಿಕ್ಕರ್ ಅಳವಡಿಸುವ ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಸ್ತೆ ಅಪಘಾತಗಳಲ್ಲಿ ಇಬ್ಬರು ಪ್ರಾಣತೆತ್ತ ಘಟನೆ ನೋಡಿ ಬೇಸತ್ತ ಪೊಲೀಸರು ತಾವೇ ರಸ್ತೆ ವಿಭಜಕ ನಿರ್ಮಾಣಕ್ಕೆ ಮುಂದಾಗಿದ್ದಾರೆ.</p>.<p>ಬನಶಂಕರಿ 6ನೇ ಹಂತದ ದಾಸೇಗೌಡನ ಪಾಳ್ಯದ 100 ಅಡಿ ರಸ್ತೆಯಲ್ಲಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ರಸ್ತೆ ವಿಭಜಕ ನಿರ್ಮಿಸಿದ್ದಾರೆ. ಸುಮಾರು 2 ಕಿಲೋಮೀಟರ್ ದೂರದವರೆಗೆ ವಿಭಜಕ ನಿರ್ಮಾಣವಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಕೃಷ್ಣಯ್ಯ, ಹೆಡ್ಕಾನ್ಸ್ಟೇಬಲ್ಗಳಾದ ಶ್ರೀನಿವಾಸ್, ಅಶೋಕ್ ಕುಮಾರ್ ಸೇರಿ ರಸ್ತೆ ಮಧ್ಯೆ ಸಿಮೆಂಟ್ ಬ್ಲಾಕ್ಗಳನ್ನು ಇರಿಸಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ರಸ್ತೆ ನಿರ್ಮಿಸಿದೆ. ನಿರ್ಮಾಣದ ವೇಳೆ ವಿಭಜಕ ನಿರ್ಮಾಣಕ್ಕೆಂದು ತಂದ ಬ್ಲಾಕ್ಗಳನ್ನು ರಸ್ತೆಬದಿ ಹಾಕಲಾಗಿತ್ತು. ಅದನ್ನು ಬಳಸಿ ವಿಭಜಕ ನಿರ್ಮಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದರು.</p>.<p>‘ರಸ್ತೆ ವಿಭಜಕ ನಿರ್ಮಿಸುವಂತೆ ಇಲಾಖೆ ವತಿಯಿಂದ ಬಿಡಿಎಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿರಲಿಲ್ಲ. ಕೊನೆಗೆ ಹಿರಿಯ ಅಧಿಕಾರಿಗಳ ಸಲಹೆಯಂತೆ ನಾವೇ ಕೆಲಸಕ್ಕಿಳಿದಿದ್ದೇವೆ’ ಎಂದು ಕೃಷ್ಣಯ್ಯ ಹೇಳಿದರು.</p>.<p>ಸಂಜೆ ವೇಳೆ ರೇಡಿಯಲ್ ಸ್ಟಿಕ್ಕರ್ ಅಳವಡಿಸುವ ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>