‘ಅ. 24ರಿಂದ ನ. 4ರವರೆಗೆ ಅಕ್ರಮ ಬಂಧನದಲ್ಲಿರಿಸಿ, ನನ್ನ ಕಾಲುಗಳನ್ನು ಕಟ್ಟಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ದೈಹಿಕ ಹಿಂಸೆ ನೀಡಿದ್ದಾರೆ. ಕಳ್ಳತನ ಕೃತ್ಯ ಒಪ್ಪಿಕೊಳ್ಳುವಂತೆ ಗನ್ ತೋರಿಸಿ ಬೆದರಿಸಿದ್ದಾರೆ’ ಎಂದು ಜಬೀನ್ ತಾಜ್ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ 30ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಕೆಂಪಾಪುರ ಅಗ್ರಹಾರ ಠಾಣೆಯ ಇನ್ಸ್ಪೆಕ್ಟರ್ ಶಿವಪ್ರಸಾದ್, ಒಬ್ಬರು ಸಬ್ ಇನ್ಸ್ಪೆಕ್ಟರ್, ಕ್ರೈಂ ಸಿಬ್ಬಂದಿಯಾದ ಶ್ರೀನಿವಾಸ, ಅರ್ಜುನ್ ಗೋಮಲೆ ಹಾಗೂ ಮಹಿಳಾ ಕಾನ್ಸ್ಟೆಬಲ್ ಹರ್ಷಿತಾ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.