<p><strong>ಚಿತ್ರದುರ್ಗ:</strong> ಭಾರತಕ್ಕೆ ದಾಸ್ಯದಿಂದ ಮುಕ್ತಿ ಹೊಂದಲು ಚಿಕ್ಕವಯಸ್ಸಿನಲ್ಲೇ ಸಂಕಲ್ಪ ಮಾಡಿದ ಅಪ್ರತಿಮ ದೇಶಭಕ್ತ ಶಿವಾಜಿ ಮಹಾರಾಜ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅಭಿಪ್ರಾಯಪಟ್ಟರು.</p>.<p>ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಶಕ್ತಿ ಮತ್ತು ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟಿದ್ದ ಶಿವಾಜಿ, ತನ್ನ ಆಡಳಿತದಲ್ಲಿ ಎಂದೆಂದೂ ಮೂಢನಂಬಿಕೆಗಳಿಗೆ ಅವಕಾಶ ನೀಡಲಿಲ್ಲ. ಇಂದಿನ ಯುವಕರೂ ಶಿವಾಜಿಯಂತೆ ಶಕ್ತಿಯ ಮೇಲೆ ನಂಬಿಕೆ ಇಡಿ. ಇಲ್ಲದ ವಿಚಾರಗಳ ಬಗ್ಗೆ ಯೋಚಿಸಲೂ ಬೇಡಿ ಎಂದು ಕಿವಿಮಾತು ಹೇಳಿದರು.</p>.<p>ಶಿವಾಜಿಗೆ ತಾಯಿಯ ಬಗ್ಗೆ ಅಪಾರ ಭಕ್ತಿ, ಗೌರವ. ತಾಯಿಯನ್ನು ಭವಾನಿ ದೇವಿ ಎಂದೇ ಪೂಜಿಸುತ್ತಿದ್ದರು. ಅಮ್ಮನಿಂದಲೇ ಎಲ್ಲ ಶಿಕ್ಷಣವನ್ನು ಕಲಿತರು ಎಂದು ಶಿವಾಜಿ ಜೀವನ ಚರಿತ್ರೆಯನ್ನು ಮೆಲುಕು ಹಾಕಿದರು.</p>.<p>‘ರಾಜ್ಯ ಸರ್ಕಾರವೇ ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಮುಂದಾಗಿದೆ. ಹಾಗಾಗಿ, ಮರಾಠರು ಅಲ್ಪಸಂಖ್ಯಾತರು ಎಂಬ ಮನೋಭಾವ ಬೇಡ. ನಾವು ನಿಮ್ಮ ಜತೆಗಿದ್ದೇವೆ. ಸರ್ಕಾರ ಹಲವು ಜನಪರ ಯೋಜನೆಗಳನ್ನು ರೂಪಿಸಿದೆ. ಅವುಗಳ ಸದ್ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು’ ಎಂದರು.</p>.<p>ಇತ್ತೀಚೆಗಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದವರೆಗೆ ಶುಲ್ಕ ವಿನಾಯಿತಿ ನೀಡಿದೆ. ಅಲ್ಲದೇ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ಪರಿಣಾಮಕಾರಿ ಅನುಷ್ಠಾನಗೊಳಿಸುತ್ತಿದೆ. ಅವುಗಳ ಪ್ರಯೋಜನ ಪಡೆದುಕೊಂಡು ಶಿಕ್ಷಣದಲ್ಲಿ ಯಶಸ್ಸು ಸಾಧಿಸಬೇಕು ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಟಿ.ಎ.ಪಿ.ಶೆಣೈ, ‘ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಶಿವಾಜಿ ಮಹಾರಾಜರ ಕಾಲದ ಚರಿತ್ರೆ ರೋಮಾಂಚನವಾಗಿದೆ. ಆತನ ಸಾಮ್ರಾಜ್ಯದಲ್ಲಿದ್ದ ಸಂಸ್ಕೃತಿ, ಧರ್ಮ, ಕಲೆ, ನೀತಿ ನಿಯಮಗಳು ಮುಂದಿನ ಪೀಳಿಗೆವರೆಗೆ ಸ್ಫೂರ್ತಿಯಾಗುತ್ತವೆ’ಎಂದು ವಿಶ್ಲೇಷಿಸಿದರು.</p>.<p>ಶಿವಾಜಿ ವನವಾಸಿಗಳನ್ನು ಸೇನಾಧಿಪತಿಗಳನ್ನಾಗಿ ಮಾಡಿಕೊಂಡಿದ್ದರು. ಕಾಡಿನ ಜನರೂ ಸ್ವತಂತ್ರವಾಗಿ ಬದುಕಬೇಕು ಎಂದು ಬಯಸಿದ್ದರು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನು ಪಣಕ್ಕಿಡುವ ನೀತಿ ಶಿವಾಜಿ ಮಹಾರಾಜರ ಸೈನ್ಯದಲ್ಲಿತ್ತು ಎಂದು ತಿಳಿಸಿದರು.</p>.<p>ವೇದಿಕೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಡಿಡಿಪಿಐ ಆಂತೋಣಿ, ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ರಾವ್ ಜಾದವ್, ಕಾರ್ಯದರ್ಶಿ ಗೋಪಾಲ್ ರಾವ್ ಜಾದವ್, ಜೀಜಾಬಾಯಿ ಮಂಡಳಿ ಅಧ್ಯಕ್ಷೆ ಉಷಾಬಾಯಿ ಇದ್ದರು.</p>.<p><strong>ನಗರದಾದ್ಯಂತ ಭವ್ಯ ಮೆರವಣಿಗೆ</strong></p>.<p>ಕಾರ್ಯಕ್ರಮಕ್ಕೂ ಮುನ್ನ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಸರ್ಕಲ್ನಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ, ಮದಕರಿನಾಯಕ ಹಾಗೂ ರಾಣಾ ಪ್ರತಾಪಸಿಂಹರ ಭಾವಚಿತ್ರಗಳು ಮತ್ತು ವಿವಿಧ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು.</p>.<p>ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಮೆರವಣಿಗೆಯಲ್ಲಿ ಕಹಳೆ, ಚಂಡೆ ಮದ್ದಳೆ, ಬೊಂಬೆ ಕುಣಿತ, ಮರಗಾಲು ಕುಣಿತ ಸೇರಿದಂತೆ ಹಲವು ಜಾನಪದ ತಂಡಗಳು ಮೆರುಗು ನೀಡಿದ್ದವು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕ– ಯುವತಿಯರು ತಲೆಗೆ ಕೆಂಪು ಮತ್ತು ಕೇಸರಿ ರುಮಾಲು ಸುತ್ತಿಕೊಂಡು, ಕುಣಿದು ಕುಪ್ಪಳಿಸಿದರು.</p>.<p>ಕನಕ ವೃತ್ತದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿರಾಯಣ್ಣ ಸರ್ಕಲ್, ಗಾಂಧಿ ವೃತ್ತ, ಎಸ್ಬಿಎಂ ಸರ್ಕಲ್, ಪ್ರವಾಸಿ ಮಂದಿರ, ಅಂಬೇಡ್ಕರ್ ಮಾರ್ಗವಾಗಿ ತರಾಸು ರಂಗಮಂದಿರ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಭಾರತಕ್ಕೆ ದಾಸ್ಯದಿಂದ ಮುಕ್ತಿ ಹೊಂದಲು ಚಿಕ್ಕವಯಸ್ಸಿನಲ್ಲೇ ಸಂಕಲ್ಪ ಮಾಡಿದ ಅಪ್ರತಿಮ ದೇಶಭಕ್ತ ಶಿವಾಜಿ ಮಹಾರಾಜ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅಭಿಪ್ರಾಯಪಟ್ಟರು.</p>.<p>ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಶಕ್ತಿ ಮತ್ತು ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟಿದ್ದ ಶಿವಾಜಿ, ತನ್ನ ಆಡಳಿತದಲ್ಲಿ ಎಂದೆಂದೂ ಮೂಢನಂಬಿಕೆಗಳಿಗೆ ಅವಕಾಶ ನೀಡಲಿಲ್ಲ. ಇಂದಿನ ಯುವಕರೂ ಶಿವಾಜಿಯಂತೆ ಶಕ್ತಿಯ ಮೇಲೆ ನಂಬಿಕೆ ಇಡಿ. ಇಲ್ಲದ ವಿಚಾರಗಳ ಬಗ್ಗೆ ಯೋಚಿಸಲೂ ಬೇಡಿ ಎಂದು ಕಿವಿಮಾತು ಹೇಳಿದರು.</p>.<p>ಶಿವಾಜಿಗೆ ತಾಯಿಯ ಬಗ್ಗೆ ಅಪಾರ ಭಕ್ತಿ, ಗೌರವ. ತಾಯಿಯನ್ನು ಭವಾನಿ ದೇವಿ ಎಂದೇ ಪೂಜಿಸುತ್ತಿದ್ದರು. ಅಮ್ಮನಿಂದಲೇ ಎಲ್ಲ ಶಿಕ್ಷಣವನ್ನು ಕಲಿತರು ಎಂದು ಶಿವಾಜಿ ಜೀವನ ಚರಿತ್ರೆಯನ್ನು ಮೆಲುಕು ಹಾಕಿದರು.</p>.<p>‘ರಾಜ್ಯ ಸರ್ಕಾರವೇ ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಮುಂದಾಗಿದೆ. ಹಾಗಾಗಿ, ಮರಾಠರು ಅಲ್ಪಸಂಖ್ಯಾತರು ಎಂಬ ಮನೋಭಾವ ಬೇಡ. ನಾವು ನಿಮ್ಮ ಜತೆಗಿದ್ದೇವೆ. ಸರ್ಕಾರ ಹಲವು ಜನಪರ ಯೋಜನೆಗಳನ್ನು ರೂಪಿಸಿದೆ. ಅವುಗಳ ಸದ್ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು’ ಎಂದರು.</p>.<p>ಇತ್ತೀಚೆಗಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದವರೆಗೆ ಶುಲ್ಕ ವಿನಾಯಿತಿ ನೀಡಿದೆ. ಅಲ್ಲದೇ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ಪರಿಣಾಮಕಾರಿ ಅನುಷ್ಠಾನಗೊಳಿಸುತ್ತಿದೆ. ಅವುಗಳ ಪ್ರಯೋಜನ ಪಡೆದುಕೊಂಡು ಶಿಕ್ಷಣದಲ್ಲಿ ಯಶಸ್ಸು ಸಾಧಿಸಬೇಕು ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಟಿ.ಎ.ಪಿ.ಶೆಣೈ, ‘ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಶಿವಾಜಿ ಮಹಾರಾಜರ ಕಾಲದ ಚರಿತ್ರೆ ರೋಮಾಂಚನವಾಗಿದೆ. ಆತನ ಸಾಮ್ರಾಜ್ಯದಲ್ಲಿದ್ದ ಸಂಸ್ಕೃತಿ, ಧರ್ಮ, ಕಲೆ, ನೀತಿ ನಿಯಮಗಳು ಮುಂದಿನ ಪೀಳಿಗೆವರೆಗೆ ಸ್ಫೂರ್ತಿಯಾಗುತ್ತವೆ’ಎಂದು ವಿಶ್ಲೇಷಿಸಿದರು.</p>.<p>ಶಿವಾಜಿ ವನವಾಸಿಗಳನ್ನು ಸೇನಾಧಿಪತಿಗಳನ್ನಾಗಿ ಮಾಡಿಕೊಂಡಿದ್ದರು. ಕಾಡಿನ ಜನರೂ ಸ್ವತಂತ್ರವಾಗಿ ಬದುಕಬೇಕು ಎಂದು ಬಯಸಿದ್ದರು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನು ಪಣಕ್ಕಿಡುವ ನೀತಿ ಶಿವಾಜಿ ಮಹಾರಾಜರ ಸೈನ್ಯದಲ್ಲಿತ್ತು ಎಂದು ತಿಳಿಸಿದರು.</p>.<p>ವೇದಿಕೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಡಿಡಿಪಿಐ ಆಂತೋಣಿ, ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ರಾವ್ ಜಾದವ್, ಕಾರ್ಯದರ್ಶಿ ಗೋಪಾಲ್ ರಾವ್ ಜಾದವ್, ಜೀಜಾಬಾಯಿ ಮಂಡಳಿ ಅಧ್ಯಕ್ಷೆ ಉಷಾಬಾಯಿ ಇದ್ದರು.</p>.<p><strong>ನಗರದಾದ್ಯಂತ ಭವ್ಯ ಮೆರವಣಿಗೆ</strong></p>.<p>ಕಾರ್ಯಕ್ರಮಕ್ಕೂ ಮುನ್ನ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಸರ್ಕಲ್ನಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ, ಮದಕರಿನಾಯಕ ಹಾಗೂ ರಾಣಾ ಪ್ರತಾಪಸಿಂಹರ ಭಾವಚಿತ್ರಗಳು ಮತ್ತು ವಿವಿಧ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು.</p>.<p>ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಮೆರವಣಿಗೆಯಲ್ಲಿ ಕಹಳೆ, ಚಂಡೆ ಮದ್ದಳೆ, ಬೊಂಬೆ ಕುಣಿತ, ಮರಗಾಲು ಕುಣಿತ ಸೇರಿದಂತೆ ಹಲವು ಜಾನಪದ ತಂಡಗಳು ಮೆರುಗು ನೀಡಿದ್ದವು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕ– ಯುವತಿಯರು ತಲೆಗೆ ಕೆಂಪು ಮತ್ತು ಕೇಸರಿ ರುಮಾಲು ಸುತ್ತಿಕೊಂಡು, ಕುಣಿದು ಕುಪ್ಪಳಿಸಿದರು.</p>.<p>ಕನಕ ವೃತ್ತದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿರಾಯಣ್ಣ ಸರ್ಕಲ್, ಗಾಂಧಿ ವೃತ್ತ, ಎಸ್ಬಿಎಂ ಸರ್ಕಲ್, ಪ್ರವಾಸಿ ಮಂದಿರ, ಅಂಬೇಡ್ಕರ್ ಮಾರ್ಗವಾಗಿ ತರಾಸು ರಂಗಮಂದಿರ ತಲುಪಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>