ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಾಧ ಕೃತ್ಯದಲ್ಲಿ ಭಾಗಿ: ಮನೆಗಳಲ್ಲಿ ಪರಿಶೀಲನೆ

Last Updated 8 ಜುಲೈ 2021, 21:11 IST
ಅಕ್ಷರ ಗಾತ್ರ

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವ್ಯಕ್ತಿಗಳ ಮನೆಗಳಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಗುರುವಾರ ರಾತ್ರಿ ಪರಿಶೀಲನೆ ನಡೆಸಿದರು.

ಪಾದರಾಯನಪುರ, ಅರ್ಫತ್ ನಗರ, ವಿ.ಎಸ್. ಗಾರ್ಡನ್, ಜನತಾ ಕಾಲೊನಿ, ಹಳೇ ಗುಡ್ಡದಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಸುಲಿಗೆ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಹಲವು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು, ಜೈಲಿಗೂ ಹೋಗಿ ಬಂದಿದ್ದರು. ಅವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು.

‘ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಕೆಲವರು, ಪುನಃ ಕೃತ್ಯದಲ್ಲಿ ತೊಡಗುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಅಂಥವರ ಪಟ್ಟಿ
ಸಿದ್ಧಪಡಿಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT