<p><strong>ಬೆಂಗಳೂರು:</strong> ಕಮಲಾನಗರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಗೊಂದಲ ಉಂಟಾಗಿದೆ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ಮೂರ್ತಿಯನ್ನು, ಸ್ಥಳದಿಂದ ಪಕ್ಕಕ್ಕೆ ಸರಸಿ ಪೊಲೀಸರು ಪೆಂಡಾಲ್ ಬಿಚ್ಚಿದ್ದಾರೆ.</p>.<p>ಬಸವೇಶ್ವರ ನಗರ ಪೊಲೀಸರ ಈ ವರ್ತನೆಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಮಲಾನಗರದ ಹಲವು ಕಡೆ ಯುವಕರು ಹಾಗೂ ಮಕ್ಕಳು, ಒಳ ರಸ್ತೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಅದಕ್ಕಾಗಿ ಅಂದದ ಪೆಂಡಾಲ್ ನಿರ್ಮಿಸಿದ್ದಾರೆ. ಗಸ್ತಿನಲ್ಲಿದ್ದ ಪೊಲೀಸರು, ಮೂರ್ತಿ ಪ್ರತಿಷ್ಠಾಪನೆ ಸ್ಥಳಕ್ಕೆ ಹೋಗಿ ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>'ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಿರಾ. ತೆರವು ಮಾಡಿ. ಠಾಣೆಗೆ ಬನ್ನಿ' ಎಂದು ಯುವಕರಿಗೆ ಹೇಳಿ ಹೋಗಿದ್ದಾರೆ.</p>.<p>ಈ ಬಗ್ಗೆ ಅಳಲು ತೋಡಿಕೊಂಡ ಯುವಕರು, 'ಪ್ರತಿವರ್ಷದಂತೆ ಈ ವರ್ಷವೂ ನಮ್ಮ ರಸ್ತೆಯ ನಿವಾಸಿಗಳಷ್ಟೇ ಸೇರಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದೇವೆ. ಪೊಲೀಸರು ಏಕಾಏಕಿ ಸ್ಥಳಕ್ಕೆ ಬಂದು, ಮೂರ್ತಿ ತೆರವು ಮಾಡಿದ್ದಾರೆ. ಪೆಂಡಾಲ್ ಬಿಚ್ಚಿದ್ದಾರೆ' ಎಂದರು.</p>.<p>'ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದಾರೆ. ಅದೇ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಇದೀಗ, ಪೊಲೀಸರು ತಮ್ಮಿಷ್ಟದಂತೆ ವರ್ತಿಸುತ್ತಿದ್ದಾರೆ. ಠಾಣೆಗೆ ಬರುವಂತೆ ಹೇಳಿ ಕಿರುಕುಳ ನೀಡುತ್ತಿದ್ದಾರೆ' ಎಂದೂ ಯುವಕರು ಹೇಳಿದರು.</p>.<p>'ಕೊರೊನಾ ನಿಯಮ ಪಾಲಿಸಿದ್ದೇವೆ. ಯಾರಿಗೂ ತೊಂದರೆ ಮಾಡದೇ ಒಳ ರಸ್ತೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ್ದೇವೆ' ಎಂದರು.</p>.<p>'ಕಮಲಾನಗರದಲ್ಲಿ ಐದು ಕಡೆಯ ಪೆಂಡಾಲ್ಗೆ ಬಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ' ಎಂದೂ ಯುವಕರು ಹೇಳಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, 'ಅನುಮತಿ ಪಡೆಯದೇ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಗೊತ್ತಾಗಿದೆ. ಗಸ್ತಿನಲ್ಲಿದ್ದ ಸಿಬ್ಬಂದಿ, ಸೂಕ್ತ ದಾಖಲೆ ಕೇಳಿದಾಗ ಕೊಟ್ಟಿಲ್ಲ. ಹೀಗಾಗಿ, ಠಾಣೆಗೆ ಬರುವಂತೆ ಹೇಳಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಮಲಾನಗರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಗೊಂದಲ ಉಂಟಾಗಿದೆ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ಮೂರ್ತಿಯನ್ನು, ಸ್ಥಳದಿಂದ ಪಕ್ಕಕ್ಕೆ ಸರಸಿ ಪೊಲೀಸರು ಪೆಂಡಾಲ್ ಬಿಚ್ಚಿದ್ದಾರೆ.</p>.<p>ಬಸವೇಶ್ವರ ನಗರ ಪೊಲೀಸರ ಈ ವರ್ತನೆಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಮಲಾನಗರದ ಹಲವು ಕಡೆ ಯುವಕರು ಹಾಗೂ ಮಕ್ಕಳು, ಒಳ ರಸ್ತೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಅದಕ್ಕಾಗಿ ಅಂದದ ಪೆಂಡಾಲ್ ನಿರ್ಮಿಸಿದ್ದಾರೆ. ಗಸ್ತಿನಲ್ಲಿದ್ದ ಪೊಲೀಸರು, ಮೂರ್ತಿ ಪ್ರತಿಷ್ಠಾಪನೆ ಸ್ಥಳಕ್ಕೆ ಹೋಗಿ ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>'ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಿರಾ. ತೆರವು ಮಾಡಿ. ಠಾಣೆಗೆ ಬನ್ನಿ' ಎಂದು ಯುವಕರಿಗೆ ಹೇಳಿ ಹೋಗಿದ್ದಾರೆ.</p>.<p>ಈ ಬಗ್ಗೆ ಅಳಲು ತೋಡಿಕೊಂಡ ಯುವಕರು, 'ಪ್ರತಿವರ್ಷದಂತೆ ಈ ವರ್ಷವೂ ನಮ್ಮ ರಸ್ತೆಯ ನಿವಾಸಿಗಳಷ್ಟೇ ಸೇರಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದೇವೆ. ಪೊಲೀಸರು ಏಕಾಏಕಿ ಸ್ಥಳಕ್ಕೆ ಬಂದು, ಮೂರ್ತಿ ತೆರವು ಮಾಡಿದ್ದಾರೆ. ಪೆಂಡಾಲ್ ಬಿಚ್ಚಿದ್ದಾರೆ' ಎಂದರು.</p>.<p>'ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳು ಮೌಖಿಕವಾಗಿ ಹೇಳಿದ್ದಾರೆ. ಅದೇ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಇದೀಗ, ಪೊಲೀಸರು ತಮ್ಮಿಷ್ಟದಂತೆ ವರ್ತಿಸುತ್ತಿದ್ದಾರೆ. ಠಾಣೆಗೆ ಬರುವಂತೆ ಹೇಳಿ ಕಿರುಕುಳ ನೀಡುತ್ತಿದ್ದಾರೆ' ಎಂದೂ ಯುವಕರು ಹೇಳಿದರು.</p>.<p>'ಕೊರೊನಾ ನಿಯಮ ಪಾಲಿಸಿದ್ದೇವೆ. ಯಾರಿಗೂ ತೊಂದರೆ ಮಾಡದೇ ಒಳ ರಸ್ತೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ್ದೇವೆ' ಎಂದರು.</p>.<p>'ಕಮಲಾನಗರದಲ್ಲಿ ಐದು ಕಡೆಯ ಪೆಂಡಾಲ್ಗೆ ಬಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ' ಎಂದೂ ಯುವಕರು ಹೇಳಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, 'ಅನುಮತಿ ಪಡೆಯದೇ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಗೊತ್ತಾಗಿದೆ. ಗಸ್ತಿನಲ್ಲಿದ್ದ ಸಿಬ್ಬಂದಿ, ಸೂಕ್ತ ದಾಖಲೆ ಕೇಳಿದಾಗ ಕೊಟ್ಟಿಲ್ಲ. ಹೀಗಾಗಿ, ಠಾಣೆಗೆ ಬರುವಂತೆ ಹೇಳಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>