‘ಮಹಿಳೆಯ ನರಳಾಟ ಗಮನಿಸಿದ್ದ ಸ್ಥಳೀಯರೊಬ್ಬರು ಮನೆಯೊಳಗೆ ಹೋಗಲು ಯತ್ನಿಸಿದ್ದರು. ಆದರೆ, ಒಳಗಿನಿಂದ ಲಾಕ್ ಆಗಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಪಶ್ಚಿಮ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತ್ವರಿತವಾಗಿ ಸ್ಪಂದಿಸಿದ ಡಿಸಿಪಿ, ಹೊಯ್ಸಳ ಗಸ್ತು ವಾಹನ ಸಿಬ್ಬಂದಿಗೆ ಸಂದೇಶ ರವಾನಿಸಿದ್ದರು’ ಎಂದು ಮೂಲಗಳು ತಿಳಿಸಿವೆ.