<p><strong>ಬೆಂಗಳೂರು:</strong> ದೇವರ ಜೀವನಹಳ್ಳಿ (ಡಿ.ಜೆ. ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ. ಹಳ್ಳಿ) ಗಲಭೆ ಪ್ರಕರಣದ ತನಿಖೆ ಕೈಗೊಂಡಿರುವ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು, ಸ್ಥಳೀಯ ಠಾಣೆಯ 18 ಪೊಲೀಸರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.</p>.<p>ಗಲಭೆ ವೇಳೆ ಠಾಣೆಗಳಲ್ಲಿ ಹಾಗೂ ಹೊರಭಾಗದಲ್ಲಿದ್ದ ಪೊಲೀಸರು ಹೇಳಿಕೆ ನೀಡಿದ್ದಾರೆ. ಅಂದು ಗಲಭೆ ಹೇಗಾಯಿತು? ಯಾರೆಲ್ಲ ಗಲಭೆ ಸ್ಥಳದಲ್ಲಿದ್ದರು? ತಮ್ಮ ಮೇಲೆ ಯಾರೆಲ್ಲ ಹಲ್ಲೆ ಮಾಡಿದರು? ವಾಹನ ಸುಟ್ಟವರು ಯಾರು? ಎಂಬ ಹಲವು ಪ್ರಶ್ನೆಗಳಿಗೆ ಹೇಳಿಕೆಯಲ್ಲಿ ಉತ್ತರಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ನಗರದ 30 ಕಡೆಗಳಲ್ಲಿ ದಾಳಿ ಮಾಡಿದ್ದ ಎನ್ಐಎ ಅಧಿಕಾರಿಗಳು, ಏರ್ಗನ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದರು. ಅವುಗಳ ಪರಿಶೀಲನೆ ಕೆಲಸ ನಡೆದಿದೆ. ಪ್ರಕರಣದ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಹುಡುಕಾಟವೂ ಚುರುಕುಗೊಂಡಿದೆ.</p>.<p>ಗಲಭೆ ಹಿಂದೆ ಕೆಲ ರಾಜಕಾರಣಿಗಳ ಕೈವಾಡವಿರುವ ಅನುಮಾನವೂ ಇದ್ದು, ಆ ಬಗ್ಗೆಯೂ ಎನ್ಐಎ ಮಾಹಿತಿ ಕಲೆಹಾಕುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇವರ ಜೀವನಹಳ್ಳಿ (ಡಿ.ಜೆ. ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ (ಕೆ.ಜಿ. ಹಳ್ಳಿ) ಗಲಭೆ ಪ್ರಕರಣದ ತನಿಖೆ ಕೈಗೊಂಡಿರುವ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು, ಸ್ಥಳೀಯ ಠಾಣೆಯ 18 ಪೊಲೀಸರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.</p>.<p>ಗಲಭೆ ವೇಳೆ ಠಾಣೆಗಳಲ್ಲಿ ಹಾಗೂ ಹೊರಭಾಗದಲ್ಲಿದ್ದ ಪೊಲೀಸರು ಹೇಳಿಕೆ ನೀಡಿದ್ದಾರೆ. ಅಂದು ಗಲಭೆ ಹೇಗಾಯಿತು? ಯಾರೆಲ್ಲ ಗಲಭೆ ಸ್ಥಳದಲ್ಲಿದ್ದರು? ತಮ್ಮ ಮೇಲೆ ಯಾರೆಲ್ಲ ಹಲ್ಲೆ ಮಾಡಿದರು? ವಾಹನ ಸುಟ್ಟವರು ಯಾರು? ಎಂಬ ಹಲವು ಪ್ರಶ್ನೆಗಳಿಗೆ ಹೇಳಿಕೆಯಲ್ಲಿ ಉತ್ತರಿಸಿದ್ದಾರೆ.</p>.<p>ಇತ್ತೀಚೆಗಷ್ಟೇ ನಗರದ 30 ಕಡೆಗಳಲ್ಲಿ ದಾಳಿ ಮಾಡಿದ್ದ ಎನ್ಐಎ ಅಧಿಕಾರಿಗಳು, ಏರ್ಗನ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದರು. ಅವುಗಳ ಪರಿಶೀಲನೆ ಕೆಲಸ ನಡೆದಿದೆ. ಪ್ರಕರಣದ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಹುಡುಕಾಟವೂ ಚುರುಕುಗೊಂಡಿದೆ.</p>.<p>ಗಲಭೆ ಹಿಂದೆ ಕೆಲ ರಾಜಕಾರಣಿಗಳ ಕೈವಾಡವಿರುವ ಅನುಮಾನವೂ ಇದ್ದು, ಆ ಬಗ್ಗೆಯೂ ಎನ್ಐಎ ಮಾಹಿತಿ ಕಲೆಹಾಕುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>