ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಸಮಯ ಪ್ರಜ್ಞೆ: ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರು

Last Updated 4 ಡಿಸೆಂಬರ್ 2019, 6:24 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸರ ಸಮಯ ಪ್ರಜ್ಞೆಯಿಂದ ನವ ದಂಪತಿ ಆತ್ಮಹತ್ಯೆಯಿಂದಪಾರಾಗಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಾಜಿ ಮತ್ತು ಸೌಮ್ಯಾ ಸಾವಿನಿಂದ ಪಾರಾದ ದಂಪತಿ. ಗಿರಿನಗರದ ತಮ್ಮ ಮನೆಯಲ್ಲಿ ಮಂಗಳವಾರ ರಾತ್ರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು.

ಇಬ್ಬರರೂ ಚಾಕುವಿನಿಂದ ಕತ್ತು ಕೊಯ್ದು ಕೊಂಡು ಆತ್ಮಹತ್ಯೆಗೆ ಮಾಡಿಕೊಳ್ಳಲು ಯತ್ನಿಸಿದ್ದರು. ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಬಾಲಾಜಿ - ಸೌಮ್ಯಾ, ಕೌಟುಂಬಿಕ ಕಲಹ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರಿಂದ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿದ,ಗಸ್ತಿನಲ್ಲಿ ಇದ್ದ ಗಿರಿನಗರ ಸಬ್ ಇನ್ ಸ್ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನು ಆಸ್ಪತ್ರೆ ಸೇರಿಸಿದ್ದರು. ಇಬ್ಬರಿಗೂ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT