‘ಇದು ಸೂಕ್ಷ್ಮ ಪ್ರಕರಣ ಆಗಿರುವ ಕಾರಣಕ್ಕೆ ಎರಡೂ ದೂರು ಆಧರಿಸಿ ಕಾನೂನು ತಜ್ಞರ ಸಲಹೆ ಕೇಳಲಾಗಿದೆ. ಅವರ ಅಭಿಪ್ರಾಯದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
‘ಇಂತಹ ಹೇಳಿಕೆ ಸಹಿಸಲ್ಲ’
ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ನಾನು ಸಹಿಸಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಚಿವರೇ ಆಗಲಿ ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು. ‘ಮಲ್ಲಿಕಾರ್ಜುನ್ ಅವರು ಏನು ಮಾತನಾಡಿದ್ದಾರೆಂದು ಗೊತ್ತಿಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಇದ್ದು ಕೀಳಾಗಿ ಮಾತನಾಡುವುದು ಸರಿಯಲ್ಲ. ನಟ ಉಪೇಂದ್ರ ಮತ್ತು ಮಲ್ಲಿಕಾರ್ಜುನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ’ ಎಂದರು.