<p><strong>ಬೆಂಗಳೂರು:</strong> ‘ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನುಗಳಿವೆ. ಆದರೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತದ ಸಂಘ (ಕೆಯುಡಬ್ಲ್ಯುಜೆ) ‘ಮೌಢ್ಯ–ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ವಿಯಷದ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರ ಕಾನೂನು ರೂಪಿಸಬಹುದು. ಆದರೆ, ಅದನ್ನು ಅನುಷ್ಠಾನಕ್ಕೆ ತರುವುದು ಕಾರ್ಯಾಂಗ. ಅಲ್ಲಿಯೂ ಸುಧಾರಣೆ ಅಗತ್ಯ’ ಎಂದರು.</p>.<p>‘ಮುಖ್ಯಮಂತ್ರಿ ಒಬ್ಬರೇ ಮೌಢ್ಯ ಮತ್ತು ಮೂಢನಂಬಿಕೆಗಳನ್ನು ಮೂಲೋತ್ಪಾಟನೆ ಮಾಡಲು ಸಾಧ್ಯವಿಲ್ಲ. ಸಚಿವರು, ಶಾಸಕರು, ಅಧಿಕಾರಿಗಳು ಎಲ್ಲರೂ ಕೈಜೋಡಿಸಿದರೆ ಕಾನೂನಿನ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗುತ್ತದೆ. ಕರ್ನಾಟಕದಲ್ಲಿ ಅಂತಹ ವಾತಾವರಣ ಇನ್ನೂ ನಿರ್ಮಾಣವಾಗಿಲ್ಲ’ ಎಂದು ಹೇಳಿದರು.</p>.<p>‘ಅಂಬೇಡ್ಕರ್, ಬುದ್ಧ, ಬಸವಣ್ಣನವರ ವಿಚಾರಧಾರೆಯ ಬೆಳಕಿನಲ್ಲಿ ಉತ್ತಮ ಸಮಾಜ ಕಟ್ಟುವ ಕನಸನ್ನು ಹೊಂದಬೇಕು. ಇಂತಹ ಮಹನೀಯರ ವಿಚಾರಧಾರೆಗಳನ್ನು ಅಧ್ಯಯನ ಮಾಡುವ ಮೂಲಕ ವೈಚಾರಿಕತೆ ರೂಢಿಸಿಕೊಳ್ಳಬೇಕು. ಆಗ ನಮ್ಮ ಮೇಲೆ ಯಾರೂ ಸವಾರಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದರು.</p>.<p>ಭಯ ಅಗತ್ಯವಿಲ್ಲ: ‘ಸ್ಮಶಾನದ ಕುರಿತು ಭಯ ಅಗತ್ಯವಿಲ್ಲ. ಅಲ್ಲಿ ದೆವ್ವವೂ ಇಲ್ಲ, ಪಿಶಾಚಿಯೂ ಇಲ್ಲ. ಸ್ಮಶಾನದಿಂದಲೇ ನಾನು ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದೇನೆ. ಎಲ್ಲವೂ ನಮ್ಮ ನಂಬಿಕೆಯನ್ನು ಆಧರಿಸಿರುತ್ತದೆ’ ಎಂದು ಸಚಿವರು ಹೇಳಿದರು.</p>.<p>ಮೌಢ್ಯ ತೊಲಗಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾದುದು. ಮೌಢ್ಯ ಮತ್ತು ಮೂಢನಂಬಿಕೆಗಳನ್ನು ದೂರ ಮಾಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.</p>.<p>ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನುಗಳಿವೆ. ಆದರೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತದ ಸಂಘ (ಕೆಯುಡಬ್ಲ್ಯುಜೆ) ‘ಮೌಢ್ಯ–ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ವಿಯಷದ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರ ಕಾನೂನು ರೂಪಿಸಬಹುದು. ಆದರೆ, ಅದನ್ನು ಅನುಷ್ಠಾನಕ್ಕೆ ತರುವುದು ಕಾರ್ಯಾಂಗ. ಅಲ್ಲಿಯೂ ಸುಧಾರಣೆ ಅಗತ್ಯ’ ಎಂದರು.</p>.<p>‘ಮುಖ್ಯಮಂತ್ರಿ ಒಬ್ಬರೇ ಮೌಢ್ಯ ಮತ್ತು ಮೂಢನಂಬಿಕೆಗಳನ್ನು ಮೂಲೋತ್ಪಾಟನೆ ಮಾಡಲು ಸಾಧ್ಯವಿಲ್ಲ. ಸಚಿವರು, ಶಾಸಕರು, ಅಧಿಕಾರಿಗಳು ಎಲ್ಲರೂ ಕೈಜೋಡಿಸಿದರೆ ಕಾನೂನಿನ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗುತ್ತದೆ. ಕರ್ನಾಟಕದಲ್ಲಿ ಅಂತಹ ವಾತಾವರಣ ಇನ್ನೂ ನಿರ್ಮಾಣವಾಗಿಲ್ಲ’ ಎಂದು ಹೇಳಿದರು.</p>.<p>‘ಅಂಬೇಡ್ಕರ್, ಬುದ್ಧ, ಬಸವಣ್ಣನವರ ವಿಚಾರಧಾರೆಯ ಬೆಳಕಿನಲ್ಲಿ ಉತ್ತಮ ಸಮಾಜ ಕಟ್ಟುವ ಕನಸನ್ನು ಹೊಂದಬೇಕು. ಇಂತಹ ಮಹನೀಯರ ವಿಚಾರಧಾರೆಗಳನ್ನು ಅಧ್ಯಯನ ಮಾಡುವ ಮೂಲಕ ವೈಚಾರಿಕತೆ ರೂಢಿಸಿಕೊಳ್ಳಬೇಕು. ಆಗ ನಮ್ಮ ಮೇಲೆ ಯಾರೂ ಸವಾರಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದರು.</p>.<p>ಭಯ ಅಗತ್ಯವಿಲ್ಲ: ‘ಸ್ಮಶಾನದ ಕುರಿತು ಭಯ ಅಗತ್ಯವಿಲ್ಲ. ಅಲ್ಲಿ ದೆವ್ವವೂ ಇಲ್ಲ, ಪಿಶಾಚಿಯೂ ಇಲ್ಲ. ಸ್ಮಶಾನದಿಂದಲೇ ನಾನು ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದೇನೆ. ಎಲ್ಲವೂ ನಮ್ಮ ನಂಬಿಕೆಯನ್ನು ಆಧರಿಸಿರುತ್ತದೆ’ ಎಂದು ಸಚಿವರು ಹೇಳಿದರು.</p>.<p>ಮೌಢ್ಯ ತೊಲಗಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾದುದು. ಮೌಢ್ಯ ಮತ್ತು ಮೂಢನಂಬಿಕೆಗಳನ್ನು ದೂರ ಮಾಡುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.</p>.<p>ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>