ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವು ವರದಿ ನೀಡಿ ವರ್ಷಗಳೇ ಉರುಳಿವೆ. ಸುದೀರ್ಘ ಹೋರಾಟ ನಡೆಸಿದರೂ ಒಳಮೀಸಲಾತಿ ಜಾರಿಯಾಗಿಲ್ಲ. ಇದಕ್ಕೆ ಆಳುವವರ ನಿರ್ಲಕ್ಷವೇ ಕಾರಣ. ವರದಿ ಜಾರಿಗೆ ನಮ್ಮ ಸರ್ಕಾರವು ಪ್ರಯತ್ನಿಸಲಿದೆ ಎಂದು ಬಿಜೆಪಿ ಮುಖಂಡರು ಶಿರಾ ವಿಧಾನಸಭಾ ಚುನಾವಣೆಯ ವೇಳೆ ಹೇಳಿದ್ದರು. ಅದು ಭರವಸೆಯಾಗಿಯೇ ಉಳಿದಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಯೋಗದ ವರದಿ ಮಂಡಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.