<p><strong>ಬೆಂಗಳೂರು</strong>: ರಾಜಕೀಯ ಮತ್ತು ಧರ್ಮಗಳಿಗೆ ಸಾಹಿತ್ಯ, ವಿಮರ್ಶೆ, ಸಂಶೋಧನೆಗಳು ಬೇಕಾಗಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿನಾಯಕ ಕೃಷ್ಣ ಗೋಕಾಕ್ ವಾಙ್ಮಯ ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ ತಿಳಿಸಿದರು.</p>.<p>ವಿನಾಯಕ ಕೃಷ್ಣ ಗೋಕಾಕ್ ವಾಙ್ಮಯ ಟ್ರಸ್ಟ್ ಹಾಗೂ ಎನ್ಎಂಕೆಆರ್ವಿ ಮಹಿಳಾ ಕಾಲೇಜು ಆಯೋಜಿಸಿದ್ದ ‘ಗೋಕಾಕ್ ಸಾಹಿತ್ಯ ಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿರ್ಲಕ್ಷ್ಯಕ್ಕೆ ಒಳಗಾಗಿ ಸೊರಗುತ್ತಿರುವ ಕ್ಷೇತ್ರಗಳಲ್ಲಿ ವಿಮರ್ಶೆ, ಸಂಶೋಧನೆಯೂ ಸೇರಿದೆ. ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹಕ್ಕೆ ಸಂಶೋಧನಾ ಕೌಶಲದ ಬಗ್ಗೆ ಮನದಟ್ಟು ಮಾಡಿಕೊಡಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಮಾಹಿತಿಯನ್ನು ಕ್ಷಣಮಾತ್ರದಲ್ಲಿಯೇ ಮೊಬೈಲ್, ಲ್ಯಾಪ್ಟಾಪ್, ಪಾಮ್ಟ್ಯಾಪ್ಗಳ ಮೂಲಕ ಪಡೆಯಬಹುದು. ಇದನ್ನೇ ಯುವಜನರು ಅನುಸರಿಸುತ್ತಿದ್ದಾರೆ. ಜ್ಞಾನ ಮತ್ತು ಮಾಹಿತಿ ಬೇರೆ ಬೇರೆ ಎಂಬುದು ಯುವಪೀಳಿಗೆಗೆ ತಿಳಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬೇಂದ್ರೆ, ಮಾಸ್ತಿ, ಕುವೆಂಪು, ಗೋಕಾಕ್, ಕಾರಂತ, ಐನ್ಸ್ಟೀನ್ ಇನ್ನಿತರ ದಾರ್ಶನಿಕರ ಬರಹಗಳಿಂದ ನಾವು ಉತ್ಕೃಷ್ಟ ಜ್ಞಾನವನ್ನು ಪಡೆಯಲು ಸಾಧ್ಯ ಎಂದು ಹೇಳಿದರು. </p>.<p>ಕಥೆಗಾರರಾದ ಲಿಂಗರಾಜ ಸೊಟ್ಟಪ್ಪನವರ್, ಅಂಜನಾ ಹೆಗಡೆ ಅವರಿಗೆ ವಿ.ಕೃ. ಗೋಕಾಕ್ ಫೆಲೋಶಿಪ್ ನೀಡಿ ಗೌರವಿಸಲಾಯಿತು. ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ, ಎನ್ಎಂಕೆಆರ್ವಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸಂಧ್ಯಾ ಹೆಗಡೆ ದೊಡ್ಡಹೊಂಡ, ಟ್ರಸ್ಟ್ ಕಾರ್ಯದರ್ಶಿ ನ.ರವಿಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜಕೀಯ ಮತ್ತು ಧರ್ಮಗಳಿಗೆ ಸಾಹಿತ್ಯ, ವಿಮರ್ಶೆ, ಸಂಶೋಧನೆಗಳು ಬೇಕಾಗಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿನಾಯಕ ಕೃಷ್ಣ ಗೋಕಾಕ್ ವಾಙ್ಮಯ ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ ತಿಳಿಸಿದರು.</p>.<p>ವಿನಾಯಕ ಕೃಷ್ಣ ಗೋಕಾಕ್ ವಾಙ್ಮಯ ಟ್ರಸ್ಟ್ ಹಾಗೂ ಎನ್ಎಂಕೆಆರ್ವಿ ಮಹಿಳಾ ಕಾಲೇಜು ಆಯೋಜಿಸಿದ್ದ ‘ಗೋಕಾಕ್ ಸಾಹಿತ್ಯ ಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿರ್ಲಕ್ಷ್ಯಕ್ಕೆ ಒಳಗಾಗಿ ಸೊರಗುತ್ತಿರುವ ಕ್ಷೇತ್ರಗಳಲ್ಲಿ ವಿಮರ್ಶೆ, ಸಂಶೋಧನೆಯೂ ಸೇರಿದೆ. ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹಕ್ಕೆ ಸಂಶೋಧನಾ ಕೌಶಲದ ಬಗ್ಗೆ ಮನದಟ್ಟು ಮಾಡಿಕೊಡಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಮಾಹಿತಿಯನ್ನು ಕ್ಷಣಮಾತ್ರದಲ್ಲಿಯೇ ಮೊಬೈಲ್, ಲ್ಯಾಪ್ಟಾಪ್, ಪಾಮ್ಟ್ಯಾಪ್ಗಳ ಮೂಲಕ ಪಡೆಯಬಹುದು. ಇದನ್ನೇ ಯುವಜನರು ಅನುಸರಿಸುತ್ತಿದ್ದಾರೆ. ಜ್ಞಾನ ಮತ್ತು ಮಾಹಿತಿ ಬೇರೆ ಬೇರೆ ಎಂಬುದು ಯುವಪೀಳಿಗೆಗೆ ತಿಳಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬೇಂದ್ರೆ, ಮಾಸ್ತಿ, ಕುವೆಂಪು, ಗೋಕಾಕ್, ಕಾರಂತ, ಐನ್ಸ್ಟೀನ್ ಇನ್ನಿತರ ದಾರ್ಶನಿಕರ ಬರಹಗಳಿಂದ ನಾವು ಉತ್ಕೃಷ್ಟ ಜ್ಞಾನವನ್ನು ಪಡೆಯಲು ಸಾಧ್ಯ ಎಂದು ಹೇಳಿದರು. </p>.<p>ಕಥೆಗಾರರಾದ ಲಿಂಗರಾಜ ಸೊಟ್ಟಪ್ಪನವರ್, ಅಂಜನಾ ಹೆಗಡೆ ಅವರಿಗೆ ವಿ.ಕೃ. ಗೋಕಾಕ್ ಫೆಲೋಶಿಪ್ ನೀಡಿ ಗೌರವಿಸಲಾಯಿತು. ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ, ಎನ್ಎಂಕೆಆರ್ವಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಸಂಧ್ಯಾ ಹೆಗಡೆ ದೊಡ್ಡಹೊಂಡ, ಟ್ರಸ್ಟ್ ಕಾರ್ಯದರ್ಶಿ ನ.ರವಿಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>