ರಾಜ್ಯಪಾಲರು ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಿದರೆ ತಪ್ಪೇನು? ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿದರೆ, ರಾಜ್ಯಪಾಲರ ಆಡಳಿತ ಹೇರಿಕೆ ಆಗಿದೆ ಎಂದು ಅರ್ಥವೇ ಎಂದು ಪ್ರಶ್ನಿಸಿದ ಅವರು, ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಾ, ಮೊಸರಲ್ಲಿ ಕಲ್ಲು ಹುಡುಕಬಾರದು ಎಂದು ಬೊಮ್ಮಾಯಿ ಹೇಳಿದರು.