ನವದೆಹಲಿ: ಹತ್ತನೇ ತರಗತಿಯ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಮರುಪರೀಕ್ಷೆ ಇರುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ದೇಶದಾದ್ಯಂತ 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಮರುಪರೀಕ್ಷೆಯನ್ನು ಏಪ್ರಿಲ್ 25ರಂದು ನಡೆಸಲು ಸಿಬಿಎಸ್ಇ ನಿರ್ಧಾರಿಸಿದೆ. ಆದರೆ, ಎಲ್ಲ 16 ಲಕ್ಷ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮರುಪರೀಕ್ಷೆ ಇರುವುದಿಲ್ಲ ಎಂದು ಟ್ವೀಟಿಸಿದ್ದಾರೆ.
I am amazed to see headlines in some news channels about confusion over retest. Out of 16 lakh students, more than 14 lakh students of Class X will not have to give retest in Maths. This is final decision. (1/2)