<p>ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಬಲಾಢ್ಯರಾಗಿದ್ದು, ಸಾಕ್ಷಿಗಳನ್ನು ತಿರುಚುವ, ಅಳಿಸಿ ಹಾಕುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ವಕೀಲ ಸಿ.ಎಚ್. ಹನುಮಂತರಾಯ ಎಚ್ಚರಿಸಿದರು.</p>.<p>ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ನ್ಯಾಯ, ರಕ್ಷಣೆ ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಬಹು ಆಯಾಮ ಹೊಂದಿರುವ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ತನಿಖೆ ದಾರಿ ತಪ್ಪದಂತೆ ಮಾಡಲು ಇಂಥ ಚಳವಳಿಗಳು ಅಗತ್ಯ ಎಂದು ಪ್ರತಿಪಾದಿಸಿದರು.</p>.<p>ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆಯಲು ನಮ್ಮಲ್ಲಿ 41 ಕಾಯ್ದೆಗಳಿವೆ. ಆದರೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಇರುವುದು 24 ಕಾಯ್ದೆಗಳು. ಇಂಥ ಲೋಪಗಳನ್ನು ಮೊದಲು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಎಐಎಂಎಸ್ಎಸ್ ಉಪಾಧ್ಯಕ್ಷೆ ಡಾ. ಸುಧಾ ಕಾಮತ್ ಮಾತನಾಡಿ, ‘ಪ್ರಜ್ವಲ್ ರೇವಣ್ಣ ಕೇವಲ ಅತ್ಯಾಚಾರಿಯಲ್ಲ, ವಿಕೃತಕಾಮಿ. ವಿಡಿಯೊ ಮಾಡಿಟ್ಟುಕೊಂಡು ಹೆಣ್ಣುಮಕ್ಕಳನ್ನು ಬ್ಲ್ಯಾಕ್ಮೇಲ್ ಮಾಡಲು ಬಳಸುತ್ತಿದ್ದ’ ಎಂದು ಆರೋಪಿಸಿದರು.</p>.<p>ಅತ್ಯಾಚಾರಿ ಪುರುಷನನ್ನು ಬಿಟ್ಟು ಬಲಿಪಶು ಮಹಿಳೆಯರನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ. ವ್ಯಾಪಕವಾಗಿ ಹರಡುತ್ತಿರುವ ಅಶ್ಲೀಲತೆ ಮನುಷ್ಯನಲ್ಲಿರುವ ಸೂಕ್ಷ್ಮ ಸಂವೇದನೆಗಳನ್ನು ನಾಶಗೊಳಿಸುತ್ತಿದೆ. ಯುವಜನರು ಇದಕ್ಕೆ ಬಲಿಯಾಗದೇ ಈ ಸಮಸ್ಯೆಗಳಿಗೆ ಮೂಲ ಕಾರಣವಾದ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ಎಐಎಂಎಸ್ಎಸ್ ರಾಜ್ಯ ಅಧ್ಯಕ್ಷೆ ಎಂ.ಎನ್. ಮಂಜುಳಾ ಮಾತನಾಡಿ, ‘ಹಾಸನದ ಈ ಘಟನೆ ಮಾನವಕುಲಕ್ಕೆ ಆದ ಅವಮಾನ. ವಿಕೃತ ಮನಸು, ಅಧಿಕಾರದ ದರ್ಪ, ರಾಜಕೀಯ ಬೆಂಬಲ ಈ ದುಷ್ಕೃತ್ಯಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳನ್ನು ಹಲವು ರೀತಿಯ ಬೆದರಿಕೆಗಳನ್ನೊಡ್ಡಿ ಈ ಕೃತ್ಯವನ್ನು ಎಸಗಲಾಗಿದೆ. ಕಾನೂನಿನಲ್ಲಿರುವ ಲೋಪಗಳು ಅಪರಾಧಿಗೆ ಶಿಕ್ಷೆಯಾಗದಂತೆ ತಡೆಯುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಬಲಾಢ್ಯರಾಗಿದ್ದು, ಸಾಕ್ಷಿಗಳನ್ನು ತಿರುಚುವ, ಅಳಿಸಿ ಹಾಕುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ವಕೀಲ ಸಿ.ಎಚ್. ಹನುಮಂತರಾಯ ಎಚ್ಚರಿಸಿದರು.</p>.<p>ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ನ್ಯಾಯ, ರಕ್ಷಣೆ ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ಮಂಗಳವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಬಹು ಆಯಾಮ ಹೊಂದಿರುವ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ತನಿಖೆ ದಾರಿ ತಪ್ಪದಂತೆ ಮಾಡಲು ಇಂಥ ಚಳವಳಿಗಳು ಅಗತ್ಯ ಎಂದು ಪ್ರತಿಪಾದಿಸಿದರು.</p>.<p>ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆಯಲು ನಮ್ಮಲ್ಲಿ 41 ಕಾಯ್ದೆಗಳಿವೆ. ಆದರೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಇರುವುದು 24 ಕಾಯ್ದೆಗಳು. ಇಂಥ ಲೋಪಗಳನ್ನು ಮೊದಲು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಎಐಎಂಎಸ್ಎಸ್ ಉಪಾಧ್ಯಕ್ಷೆ ಡಾ. ಸುಧಾ ಕಾಮತ್ ಮಾತನಾಡಿ, ‘ಪ್ರಜ್ವಲ್ ರೇವಣ್ಣ ಕೇವಲ ಅತ್ಯಾಚಾರಿಯಲ್ಲ, ವಿಕೃತಕಾಮಿ. ವಿಡಿಯೊ ಮಾಡಿಟ್ಟುಕೊಂಡು ಹೆಣ್ಣುಮಕ್ಕಳನ್ನು ಬ್ಲ್ಯಾಕ್ಮೇಲ್ ಮಾಡಲು ಬಳಸುತ್ತಿದ್ದ’ ಎಂದು ಆರೋಪಿಸಿದರು.</p>.<p>ಅತ್ಯಾಚಾರಿ ಪುರುಷನನ್ನು ಬಿಟ್ಟು ಬಲಿಪಶು ಮಹಿಳೆಯರನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ. ವ್ಯಾಪಕವಾಗಿ ಹರಡುತ್ತಿರುವ ಅಶ್ಲೀಲತೆ ಮನುಷ್ಯನಲ್ಲಿರುವ ಸೂಕ್ಷ್ಮ ಸಂವೇದನೆಗಳನ್ನು ನಾಶಗೊಳಿಸುತ್ತಿದೆ. ಯುವಜನರು ಇದಕ್ಕೆ ಬಲಿಯಾಗದೇ ಈ ಸಮಸ್ಯೆಗಳಿಗೆ ಮೂಲ ಕಾರಣವಾದ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ಎಐಎಂಎಸ್ಎಸ್ ರಾಜ್ಯ ಅಧ್ಯಕ್ಷೆ ಎಂ.ಎನ್. ಮಂಜುಳಾ ಮಾತನಾಡಿ, ‘ಹಾಸನದ ಈ ಘಟನೆ ಮಾನವಕುಲಕ್ಕೆ ಆದ ಅವಮಾನ. ವಿಕೃತ ಮನಸು, ಅಧಿಕಾರದ ದರ್ಪ, ರಾಜಕೀಯ ಬೆಂಬಲ ಈ ದುಷ್ಕೃತ್ಯಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳನ್ನು ಹಲವು ರೀತಿಯ ಬೆದರಿಕೆಗಳನ್ನೊಡ್ಡಿ ಈ ಕೃತ್ಯವನ್ನು ಎಸಗಲಾಗಿದೆ. ಕಾನೂನಿನಲ್ಲಿರುವ ಲೋಪಗಳು ಅಪರಾಧಿಗೆ ಶಿಕ್ಷೆಯಾಗದಂತೆ ತಡೆಯುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>