ಎಐಎಂಎಸ್ಎಸ್ ರಾಜ್ಯ ಅಧ್ಯಕ್ಷೆ ಎಂ.ಎನ್. ಮಂಜುಳಾ ಮಾತನಾಡಿ, ‘ಹಾಸನದ ಈ ಘಟನೆ ಮಾನವಕುಲಕ್ಕೆ ಆದ ಅವಮಾನ. ವಿಕೃತ ಮನಸು, ಅಧಿಕಾರದ ದರ್ಪ, ರಾಜಕೀಯ ಬೆಂಬಲ ಈ ದುಷ್ಕೃತ್ಯಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳನ್ನು ಹಲವು ರೀತಿಯ ಬೆದರಿಕೆಗಳನ್ನೊಡ್ಡಿ ಈ ಕೃತ್ಯವನ್ನು ಎಸಗಲಾಗಿದೆ. ಕಾನೂನಿನಲ್ಲಿರುವ ಲೋಪಗಳು ಅಪರಾಧಿಗೆ ಶಿಕ್ಷೆಯಾಗದಂತೆ ತಡೆಯುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.