<p><strong>ಬೆಂಗಳೂರು:</strong> ‘ನ್ಯಾಪ್ಟಾಲ್’ ಆನ್ಲೈನ್ ಕಂಪನಿಯಿಂದ ಕಾರು ಉಡುಗೊರೆ ಬಂದಿರುವುದಾಗಿ ಹೇಳಿ ನಗರದ ನಿವಾಸಿಯೊಬ್ಬರಿಂದ ₹ 11.65 ಲಕ್ಷ ಪಡೆದು ವಂಚಿಸಲಾಗಿದೆ. ಈ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಯನಗರದ 9ನೇ ಹಂತದ 49 ವರ್ಷದ ನಿವಾಸಿ ಅರುಣ್, ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಅರುಣ್, ಎಸ್ಬಿಐ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಅ. 16ರಂದು ಅವರ ಮನೆ ವಿಳಾಸಕ್ಕೆ ಅಂಚೆ ಮೂಲಕ ‘ನ್ಯಾಪ್ಟಾಲ್ ಉಡುಗೊರೆ ವೋಚರ್’ ಬಂದಿತ್ತು. ಅದನ್ನು ತೆರೆದು ನೋಡಿದಾಗ, ‘ಮೊದಲ ಬಹುಮಾನ ₹ 8.80 ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಗೆದ್ದಿದ್ದೀರಾ. ಅದನ್ನು ಪಡೆದುಕೊಳ್ಳಲು ಮೊಬೈಲ್ ನಂಬರ್ 9836****91 ಸಂಪರ್ಕಿಸಿ’ ಎಂಬ ಬರಹವಿತ್ತು.’</p>.<p>‘ಕಾರು ಸಿಗುವುದೆಂಬ ಆಸೆಯಿಂದ ದೂರುದಾರ, ಮೊಬೈಲ್ ನಂಬರ್ಗೆ ಕರೆ ಮಾಡಿದ್ದರು. ನ್ಯಾಪ್ಟಾಲ್ ಪ್ರತಿನಿಧಿ ಸೋಗಿನಲ್ಲಿ ಮಾತನಾಡಿದ್ದ ಆರೋಪಿ, ‘ಕಾರನ್ನು ನಿಮ್ಮ ಮನೆಗೆ ಕಳುಹಿಸುತ್ತೇವೆ. ಕಾರು ನೋಂದಣಿ ಹಾಗೂ ವಿಲೇವಾರಿಗೆ ಕೆಲ ಶುಲ್ಕಗಳನ್ನು ಪಾವತಿಸಬೇಕು’ ಎಂದಿದ್ದ.</p>.<p class="Subhead">ಆರೋಪಿ ಮಾತು ನಂಬಿದ್ದ ದೂರುದಾರ, ಆತ ಹೇಳಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 11.65 ಲಕ್ಷ ಜಮೆ ಮಾಡಿದ್ದರು. ಅದಾದ ನಂತರ, ಯಾವುದೇ ಕಾರು ನೀಡಿರಲಿಲ್ಲ. ಹಣ ವಾಪಸು ಕೇಳಿದರೂ ಕೊಟ್ಟಿರಲಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನ್ಯಾಪ್ಟಾಲ್’ ಆನ್ಲೈನ್ ಕಂಪನಿಯಿಂದ ಕಾರು ಉಡುಗೊರೆ ಬಂದಿರುವುದಾಗಿ ಹೇಳಿ ನಗರದ ನಿವಾಸಿಯೊಬ್ಬರಿಂದ ₹ 11.65 ಲಕ್ಷ ಪಡೆದು ವಂಚಿಸಲಾಗಿದೆ. ಈ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಯನಗರದ 9ನೇ ಹಂತದ 49 ವರ್ಷದ ನಿವಾಸಿ ಅರುಣ್, ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಅರುಣ್, ಎಸ್ಬಿಐ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಅ. 16ರಂದು ಅವರ ಮನೆ ವಿಳಾಸಕ್ಕೆ ಅಂಚೆ ಮೂಲಕ ‘ನ್ಯಾಪ್ಟಾಲ್ ಉಡುಗೊರೆ ವೋಚರ್’ ಬಂದಿತ್ತು. ಅದನ್ನು ತೆರೆದು ನೋಡಿದಾಗ, ‘ಮೊದಲ ಬಹುಮಾನ ₹ 8.80 ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಗೆದ್ದಿದ್ದೀರಾ. ಅದನ್ನು ಪಡೆದುಕೊಳ್ಳಲು ಮೊಬೈಲ್ ನಂಬರ್ 9836****91 ಸಂಪರ್ಕಿಸಿ’ ಎಂಬ ಬರಹವಿತ್ತು.’</p>.<p>‘ಕಾರು ಸಿಗುವುದೆಂಬ ಆಸೆಯಿಂದ ದೂರುದಾರ, ಮೊಬೈಲ್ ನಂಬರ್ಗೆ ಕರೆ ಮಾಡಿದ್ದರು. ನ್ಯಾಪ್ಟಾಲ್ ಪ್ರತಿನಿಧಿ ಸೋಗಿನಲ್ಲಿ ಮಾತನಾಡಿದ್ದ ಆರೋಪಿ, ‘ಕಾರನ್ನು ನಿಮ್ಮ ಮನೆಗೆ ಕಳುಹಿಸುತ್ತೇವೆ. ಕಾರು ನೋಂದಣಿ ಹಾಗೂ ವಿಲೇವಾರಿಗೆ ಕೆಲ ಶುಲ್ಕಗಳನ್ನು ಪಾವತಿಸಬೇಕು’ ಎಂದಿದ್ದ.</p>.<p class="Subhead">ಆರೋಪಿ ಮಾತು ನಂಬಿದ್ದ ದೂರುದಾರ, ಆತ ಹೇಳಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 11.65 ಲಕ್ಷ ಜಮೆ ಮಾಡಿದ್ದರು. ಅದಾದ ನಂತರ, ಯಾವುದೇ ಕಾರು ನೀಡಿರಲಿಲ್ಲ. ಹಣ ವಾಪಸು ಕೇಳಿದರೂ ಕೊಟ್ಟಿರಲಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>