ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ರಚಿಸಿದ ವಿಶೇಷ ತನಿಖಾ ತಂಡವನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಬೆನ್ನಲ್ಲೇ, ಇವರಿಬ್ಬರನ್ನು ಗುರಿಯಾಗಿಸಿ, ಶಿವಕುಮಾರ್ ಅವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿರುವ ಭಿತ್ತಿಪತ್ರಗಳನ್ನು ಸೋಮವಾರ ರಾತ್ರಿ ನಗರದ ಹಲವೆಡೆ ಅಂಟಿಸಲಾಗಿದೆ.