ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಕೆ.ಎನ್.ಪುಟ್ಟೇಗೌಡ ಅವರು, ‘ಹೊಸ ಪ್ರಕರಣಗಳಲ್ಲಿ ಯಾವುದೇ ಅರ್ಜಿದಾರರು ತಡೆ ಆದೇಶ ಪಡೆಯದಂತೆ ಕಾನೂನು ರೀತ್ಯಾ ಅಧೀನ ನ್ಯಾಯಾಲಯಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಅಕ್ರಮ ಕಟ್ಟಡಗಳ ಬಗ್ಗೆ ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಬಂದಿರುವ ದೂರುಗಳ ಪರಿಶೀಲನೆ ನಡೆಯುತ್ತಿದೆ. ಈ ಕುರಿತ ವಿವರಗಳನ್ನು ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.