<p><strong>ಬೆಂಗಳೂರು:</strong> ಹೈಕೋರ್ಟ್ ಆದೇಶ ಪಾಲನೆ ಮಾಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರು, ಮೇಯರ್, ಉಪ ಮೇಯರ್ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ಕಾರ್ಯವೈಖರಿಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮತ್ತೊಮ್ಮೆ ಕಿಡಿ ಕಾರಿದೆ.</p>.<p>‘ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು–ನೋವುಗಳಿಗೆ ಈಡಾಗುತ್ತಿದ್ದಾರೆ’ ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಆಯುಕ್ತರಿಗೆ ಕೋರ್ಟ್ ಆದೇಶ ಧಿಕ್ಕರಿಸುವ ಯಾವುದೇ ಉದ್ದೇಶ ಇರಲಿಲ್ಲ. ಕೋರ್ಟ್ ಆದೇಶ ಪಾಲನೆಗೆ ನಿಯಮ ರೂಪಿಸಲು ಸಭೆ ನಡೆಸಲಾಗಿದೆ’ ಎಂದು ಸಮಜಾಯಿಷಿ ನೀಡಿದರು.</p>.<p>ಇದನ್ನು ಬಿಲ್ಕುಲ್ ಒಪ್ಪದ ಮುಖ್ಯ ನ್ಯಾಯಮೂರ್ತಿಗಳು, ‘2019ರ ಸೆಪ್ಟೆಂಬರ್ನಲ್ಲಿ ಕೋರ್ಟ್ ಹೊರಡಿಸಿದ ಆದೇಶ ಪಾಲಿಸುವ ವಿಚಾರವನ್ನು ಕೌನ್ಸಿಲ್ ಸಭೆಯಲ್ಲಿ ಮುಂದಿಡಲು ಸಭೆ ನಡೆಸಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಆಯುಕ್ತರೇ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಇದರಿಂದ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p>.<p>‘ಕೋರ್ಟ್ ಆದೇಶದ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ನಿರ್ಣಯ ಕೈಗೊಂಡವರ ವಿವರಗಳನ್ನು ಇನ್ನೂ ಏಕೆ ಒದಗಿಸುತ್ತಿಲ್ಲ, ವಿವರಗಳನ್ನು ಒದಗಿಸುತ್ತಿರೋ ಇಲ್ಲವೇ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳನ್ನು ನ್ಯಾಯಪೀಠದ ಮುಂದೆ ಖುದ್ದು ಹಾಜರುಪಡಿಸುತ್ತೀರೋ ಹೇಗೆ’ ಎಂದು ಖಾರವಾಗಿ ಪ್ರಶ್ನಿಸಿದರು.</p>.<p>‘ಇನ್ನು ಮುಂದೆ ಕೋರ್ಟ್ ಆದೇಶದ ವಿರುದ್ಧ ನಿರ್ಧಾರ ಕೈಗೊಳ್ಳಲು ಇಂತಹ ಸಭೆಗಳನ್ನು ನಡೆಸುವುದಿಲ್ಲ ಎಂದು ಕ್ಷಮೆಯಾಚಿಸಿ ಅವರಿಂದಲೇ ಪ್ರಮಾಣಪತ್ರ ಸಲ್ಲಿಸಿದರೆ ಸರಿ. ಇಲ್ಲವಾದರೆ ಕೋರ್ಟ್ ಸೂಕ್ತ ಆದೇಶ ಹೊರಡಿಸುತ್ತದೆ’ ಎಂದು ಆಯುಕ್ತರಿಗೆ ತಾಕೀತು ಮಾಡಿ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದರು.</p>.<p class="Subhead">ಏನದು ಆದೇಶ?: ‘ನಗರದ ರಸ್ತೆ ಗುಂಡಿಗಳಿಂದ ಉಂಟಾದ ಆಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಈ ಸಂಬಂಧ ಜಾಹೀರಾತು ಪ್ರಕಟಣೆ ನೀಡಬೇಕು‘ ಎಂದು ಹೈಕೋರ್ಟ್, 2019ರ ಸೆಪ್ಟೆಂಬರ್ನಲ್ಲಿ ಬಿಬಿಎಂಪಿಗೆ ನಿರ್ದೇಶಿಸಿತ್ತು.</p>.<p>ಈ ಆದೇಶವನ್ನು ಪಾಲಿಸದ ಬಿಬಿಎಂಪಿ ಆಯುಕ್ತರು, ಮೇಯರ್, ಉಪ ಮೇಯರ್ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದರು. ಈ ಕ್ರಮಕ್ಕೆ ವ್ಯಗ್ರವಾಗಿರುವ ನ್ಯಾಯಪೀಠ, ‘ಸಭೆಯಲ್ಲಿ ಭಾಗವಹಿಸಿದ್ದವರ ಹೆಸರು ಹಾಗೂ ವಿಳಾಸಗಳ ವಿವರ ಒದಗಿಸಿ’ ಎಂದು ಈ ಹಿಂದಿನ ವಿಚಾರಣೆ ವೇಳೆ ತಾಕೀತು ಮಾಡಿತ್ತು.</p>.<p><strong>ನ್ಯಾಯಪೀಠದ ಪಟ್ಟು</strong></p>.<p>‘ಕೋರ್ಟ್ ಆದೇಶದ ಬಗ್ಗೆ ಚರ್ಚೆ ನಡೆಸುವ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳ ಹೆಸರುಗಳನ್ನು ಬಿಬಿಎಂಪಿ ಆಯುಕ್ತರು ಕೋರ್ಟ್ಗೆ ತಿಳಿಸಬೇಕು’ ಎಂದು ನ್ಯಾಯಪೀಠ ಪಟ್ಟು ಹಿಡಿದಿದೆ.</p>.<p>‘ಒಂದೊಮ್ಮೆ ಅವರು ಕೋರ್ಟ್ಗೆ ಹಾಜರಾಗಬಾರದು ಎಂಬುದು ನಿಮ್ಮ ಭಾವನೆಯಾಗಿದ್ದರೆ, ಈ ವಿಚಾರದಲ್ಲಿ ನೀವೇ ತಪ್ಪಿತಸ್ಥರು ಎಂಬುದಾಗಿ ಒಪ್ಪಿಕೊಳ್ಳಬೇಕು’ ಎಂದು ಬಿಬಿಎಂಪಿ ಪರ ವಕೀಲರಿಗೆ ಸೂಚಿಸಿದೆ.</p>.<p>ಆಯುಕ್ತರು ಅನಕ್ಷರಸ್ಥರೇ, ಕೋರ್ಟ್ ಆದೇಶ ಸರಿ ಇಲ್ಲ ಎನಿಸಿದರೆ, ಅದನ್ನು ಪ್ರಶ್ನಿಸಬಹುದಾಗಿತ್ತು. ಅದುಬಿಟ್ಟು ಆದೇಶವನ್ನೇ ಧಿಕ್ಕರಿಸಿದರೆ ಸಹಿಸಲಾಗುವುದಿಲ್ಲ</p>.<p><strong>- ಅಭಯ್ ಎಸ್.ಓಕಾ, ಮುಖ್ಯ ನ್ಯಾಯಮೂರ್ತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೈಕೋರ್ಟ್ ಆದೇಶ ಪಾಲನೆ ಮಾಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರು, ಮೇಯರ್, ಉಪ ಮೇಯರ್ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ಕಾರ್ಯವೈಖರಿಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮತ್ತೊಮ್ಮೆ ಕಿಡಿ ಕಾರಿದೆ.</p>.<p>‘ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು–ನೋವುಗಳಿಗೆ ಈಡಾಗುತ್ತಿದ್ದಾರೆ’ ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಆಯುಕ್ತರಿಗೆ ಕೋರ್ಟ್ ಆದೇಶ ಧಿಕ್ಕರಿಸುವ ಯಾವುದೇ ಉದ್ದೇಶ ಇರಲಿಲ್ಲ. ಕೋರ್ಟ್ ಆದೇಶ ಪಾಲನೆಗೆ ನಿಯಮ ರೂಪಿಸಲು ಸಭೆ ನಡೆಸಲಾಗಿದೆ’ ಎಂದು ಸಮಜಾಯಿಷಿ ನೀಡಿದರು.</p>.<p>ಇದನ್ನು ಬಿಲ್ಕುಲ್ ಒಪ್ಪದ ಮುಖ್ಯ ನ್ಯಾಯಮೂರ್ತಿಗಳು, ‘2019ರ ಸೆಪ್ಟೆಂಬರ್ನಲ್ಲಿ ಕೋರ್ಟ್ ಹೊರಡಿಸಿದ ಆದೇಶ ಪಾಲಿಸುವ ವಿಚಾರವನ್ನು ಕೌನ್ಸಿಲ್ ಸಭೆಯಲ್ಲಿ ಮುಂದಿಡಲು ಸಭೆ ನಡೆಸಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಆಯುಕ್ತರೇ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಇದರಿಂದ ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p>.<p>‘ಕೋರ್ಟ್ ಆದೇಶದ ಬಗ್ಗೆ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಲು ನಿರ್ಣಯ ಕೈಗೊಂಡವರ ವಿವರಗಳನ್ನು ಇನ್ನೂ ಏಕೆ ಒದಗಿಸುತ್ತಿಲ್ಲ, ವಿವರಗಳನ್ನು ಒದಗಿಸುತ್ತಿರೋ ಇಲ್ಲವೇ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳನ್ನು ನ್ಯಾಯಪೀಠದ ಮುಂದೆ ಖುದ್ದು ಹಾಜರುಪಡಿಸುತ್ತೀರೋ ಹೇಗೆ’ ಎಂದು ಖಾರವಾಗಿ ಪ್ರಶ್ನಿಸಿದರು.</p>.<p>‘ಇನ್ನು ಮುಂದೆ ಕೋರ್ಟ್ ಆದೇಶದ ವಿರುದ್ಧ ನಿರ್ಧಾರ ಕೈಗೊಳ್ಳಲು ಇಂತಹ ಸಭೆಗಳನ್ನು ನಡೆಸುವುದಿಲ್ಲ ಎಂದು ಕ್ಷಮೆಯಾಚಿಸಿ ಅವರಿಂದಲೇ ಪ್ರಮಾಣಪತ್ರ ಸಲ್ಲಿಸಿದರೆ ಸರಿ. ಇಲ್ಲವಾದರೆ ಕೋರ್ಟ್ ಸೂಕ್ತ ಆದೇಶ ಹೊರಡಿಸುತ್ತದೆ’ ಎಂದು ಆಯುಕ್ತರಿಗೆ ತಾಕೀತು ಮಾಡಿ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದರು.</p>.<p class="Subhead">ಏನದು ಆದೇಶ?: ‘ನಗರದ ರಸ್ತೆ ಗುಂಡಿಗಳಿಂದ ಉಂಟಾದ ಆಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಈ ಸಂಬಂಧ ಜಾಹೀರಾತು ಪ್ರಕಟಣೆ ನೀಡಬೇಕು‘ ಎಂದು ಹೈಕೋರ್ಟ್, 2019ರ ಸೆಪ್ಟೆಂಬರ್ನಲ್ಲಿ ಬಿಬಿಎಂಪಿಗೆ ನಿರ್ದೇಶಿಸಿತ್ತು.</p>.<p>ಈ ಆದೇಶವನ್ನು ಪಾಲಿಸದ ಬಿಬಿಎಂಪಿ ಆಯುಕ್ತರು, ಮೇಯರ್, ಉಪ ಮೇಯರ್ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದರು. ಈ ಕ್ರಮಕ್ಕೆ ವ್ಯಗ್ರವಾಗಿರುವ ನ್ಯಾಯಪೀಠ, ‘ಸಭೆಯಲ್ಲಿ ಭಾಗವಹಿಸಿದ್ದವರ ಹೆಸರು ಹಾಗೂ ವಿಳಾಸಗಳ ವಿವರ ಒದಗಿಸಿ’ ಎಂದು ಈ ಹಿಂದಿನ ವಿಚಾರಣೆ ವೇಳೆ ತಾಕೀತು ಮಾಡಿತ್ತು.</p>.<p><strong>ನ್ಯಾಯಪೀಠದ ಪಟ್ಟು</strong></p>.<p>‘ಕೋರ್ಟ್ ಆದೇಶದ ಬಗ್ಗೆ ಚರ್ಚೆ ನಡೆಸುವ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳ ಹೆಸರುಗಳನ್ನು ಬಿಬಿಎಂಪಿ ಆಯುಕ್ತರು ಕೋರ್ಟ್ಗೆ ತಿಳಿಸಬೇಕು’ ಎಂದು ನ್ಯಾಯಪೀಠ ಪಟ್ಟು ಹಿಡಿದಿದೆ.</p>.<p>‘ಒಂದೊಮ್ಮೆ ಅವರು ಕೋರ್ಟ್ಗೆ ಹಾಜರಾಗಬಾರದು ಎಂಬುದು ನಿಮ್ಮ ಭಾವನೆಯಾಗಿದ್ದರೆ, ಈ ವಿಚಾರದಲ್ಲಿ ನೀವೇ ತಪ್ಪಿತಸ್ಥರು ಎಂಬುದಾಗಿ ಒಪ್ಪಿಕೊಳ್ಳಬೇಕು’ ಎಂದು ಬಿಬಿಎಂಪಿ ಪರ ವಕೀಲರಿಗೆ ಸೂಚಿಸಿದೆ.</p>.<p>ಆಯುಕ್ತರು ಅನಕ್ಷರಸ್ಥರೇ, ಕೋರ್ಟ್ ಆದೇಶ ಸರಿ ಇಲ್ಲ ಎನಿಸಿದರೆ, ಅದನ್ನು ಪ್ರಶ್ನಿಸಬಹುದಾಗಿತ್ತು. ಅದುಬಿಟ್ಟು ಆದೇಶವನ್ನೇ ಧಿಕ್ಕರಿಸಿದರೆ ಸಹಿಸಲಾಗುವುದಿಲ್ಲ</p>.<p><strong>- ಅಭಯ್ ಎಸ್.ಓಕಾ, ಮುಖ್ಯ ನ್ಯಾಯಮೂರ್ತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>