‘ಎಲ್ಲ ಪೌರಕಾರ್ಮಿಕರನ್ನು ಮೂರು ತಿಂಗಳ ಒಳಗಾಗಿ ಕಾಯಂಗೊಳಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ. 60 ವಯಸ್ಸಿನ ನಂತರ ನಿವೃತ್ತಿಯಾದವರಿಗೆ ಇಡುಗಂಟು ನೀಡುವುದಾಗಿಯೂ ಹೇಳಿದ್ದಾರೆ. ಮಕ್ಕಳ ಖಾಸಗಿ ಶಾಲೆ ಶುಲ್ಕ ಭರಿಸುವ, ವಸತಿ ವ್ಯವಸ್ಥೆ ಒದಗಿಸುವ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಸಂಬಂಧ ಸಮಿತಿ ರಚಿಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಹೀಗಾಗಿ, ಪ್ರತಿಭಟನೆ ಹಿಂಪಡೆಯಲಾಗಿದೆ’ ಎಂದು ಮುಖಂಡರು ತಿಳಿಸಿದ್ದಾರೆ.