ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡತನ, ಹಸಿವು, ರೋಗ ಕಾಂಗ್ರೆಸ್‌ ಕೊಡುಗೆ: ನಳಿನ್‌ ಕುಮಾರ್ ಕಟೀಲ್‌

Last Updated 10 ಅಕ್ಟೋಬರ್ 2021, 20:37 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಾತಂತ್ಯದ ನಂತರ ಬಹುತೇಕ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಬಡತನ, ಹಸಿವು, ರೋಗ ಮತ್ತು ನಿರುದ್ಯೋಗವನ್ನು ದೇಶದ ಜನರಿಗೆ ಕೊಡುಗೆಯಾಗಿ ನೀಡಿತು ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದರು.

ನಗರದ ಬಿಟಿಎಂ ಬಡಾವಣೆಯಲ್ಲಿ ಯುವ ಮೋರ್ಚಾ ಸಂಘಟಿಸಿದ ನವಭಾರತ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರು ಭವಿಷ್ಯದ ಬೆಳಕು ನೀಡಿದ ನಾಯಕ. ದೇಶದಲ್ಲಿ 2014 ರವರೆಗೆ ಯುವಕರು ಸ್ವಾಮಿ ವಿವೇಕಾನಂದರನ್ನು ಪೂಜಿಸಿ ಆರಾಧಿಸಿದರು. ಅಮಿತಾಬ್‌ ಬಚ್ಚನ್‌, ಶಾರೂಖ್‌ ಖಾನ್‌ ಅವರನ್ನು ಪ್ರೀತಿಸಿದ್ದು ಕಂಡಿದ್ದೇವೆ. 2014 ರ ಬಳಿಕ ದೇಶದ ಯುವಕರು ಮೋದಿಯರವನ್ನು ಆರಾಧಿಸುತ್ತಿದ್ದಾರೆ. ಅವರನ್ನೇ ಪ್ರೀತಿಸುತ್ತಿದ್ದಾರೆ. ಅವರು ಈ ದೇಶದ ಐಕಾನ್‌
ಆಗಿ ಹೊರ ಹೊಮ್ಮಿದ್ದಾರೆಎಂದರು.

ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿದ್ದ ಕನಸನ್ನು ನನಸು ಮಾಡಲು ದೃಢ ಸಂಕಲ್ಪ ಮಾಡಿದ್ದಾರೆ. ಬಡತನ, ಹಸಿವು, ರೋಗ ಮುಕ್ತ ಭಾರತದ ನಿರ್ಮಾಣ ಮಾಡಲು ಶ್ರಮಿಸುತ್ತಿದ್ದಾರೆ. ರಾಮಮಂದಿರಕ್ಕೆ ಮಾತ್ರ ಶಿಲಾನ್ಯಾಸ ಮಾಡಿಲ್ಲ, ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ಮಾಡಿದ್ದಾರೆ ಎಂದು ನಳಿನ್‌ ಕುಮಾರ್‌ ಹೇಳಿದರು.

ಆರ್‌.ಆರ್‌.ನಗರದಲ್ಲಿ ಕಮಲ ಅರಳಿದೆ. ಇಲ್ಲಿ ಕಮಲ ಅರಳಿದ ಮೇಲೆ ಇನ್ನು ಬಿಟಿಎಂಲೇಔಟ್‌ ಬಾಕಿ ಉಳಿದೀತೇ? ಮುಂದಿನ ದಿನಗಳಲ್ಲಿ ಸಿದ್ರಾಮಣ್ಣ, ರಾಮಲಿಂಗಾರೆಡ್ಡಿ ಅವರಿಗೆ ಚುನಾವಣೆಗೆ ನಿಲ್ಲಲು ಜಾಗ ಇಲ್ಲದ ಸ್ಥಿತಿ ಉಂಟಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಸಚಿವ ಮುನಿರತ್ನ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂದೀಪ್‌ ಕುಮಾರ್‌ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT