ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿದ್ದ ಕನಸನ್ನು ನನಸು ಮಾಡಲು ದೃಢ ಸಂಕಲ್ಪ ಮಾಡಿದ್ದಾರೆ. ಬಡತನ, ಹಸಿವು, ರೋಗ ಮುಕ್ತ ಭಾರತದ ನಿರ್ಮಾಣ ಮಾಡಲು ಶ್ರಮಿಸುತ್ತಿದ್ದಾರೆ. ರಾಮಮಂದಿರಕ್ಕೆ ಮಾತ್ರ ಶಿಲಾನ್ಯಾಸ ಮಾಡಿಲ್ಲ, ಸದೃಢ ಮತ್ತು ಸಮೃದ್ಧ ಭಾರತ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.