ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಎಚ್ಎಂಟಿ ಮುಖ್ಯರಸ್ತೆ, ಸುಬೇದಾರ್ ಪಾಳ್ಯ, ದಿವಾನರ ಪಾಳ್ಯ, ಗೋಕುಲ, ಮಲ್ಲೇಶ್ವರ, ವಯ್ಯಾಲಿಕಾವಲ್, ಪ್ಯಾಲೇಸ್ ಗುಟ್ಟಹಳ್ಳಿ, ಪೈಪ್ಲೈನ್ ಪ್ರದೇಶ, ಅಂಬೇಡ್ಕರ್ ನಗರ, ಯಶವಂತಪುರ, ಬಿಎಚ್ಇಎಲ್ ಹಾಗೂ ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.