'ಪಿಪಿಇ ಕಿಟ್ ಖರೀದಿಯಲ್ಲಿ ಅಧಿಕಾರಿಗಳು, ನಿಯಮದ ಪ್ರಕಾರವೇ ಕೆಲಸ ಮಾಡಿ ಸರ್ಕಾರಕ್ಕೆ ಲಾಭ ಮಾಡಿಕೊಟ್ಟಿದ್ದಾರೆ. ಆದರೆ, ಎಲ್-4ನಲ್ಲಿದ್ದ ಯುಕ್ಬಾ ಪ್ಯಾಷನ್ ಹಾಗೂ ಇತರರು, ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಆಗಿರುವುದಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಕಂಪನಿ ಹೆಸರು ಹಾಗೂ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ಅಂಥವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು' ಎಂದೂ ಉಮೇಶ್ ಪುತ್ರನ್ ತಿಳಿಸಿದ್ದಾರೆ.