<p><strong>ಬೆಂಗಳೂರು: </strong>‘ವಿಧಾನಪರಿಷತ್ತಿನಲ್ಲಿ ನಡೆದ ಅಹಿತಕರ ಘಟನೆ ವೇಳೆ ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದಲೇ ಬಿಜೆಪಿ ಸದಸ್ಯರು ಸದನ ಸಮಿತಿಗೆ ರಾಜೀನಾಮೆ ನೀಡಿರುವ ಅನುಮಾನವಿದೆ’ ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಹೇಳಿದರು.</p>.<p>ಡಿ. 15ರಂದು ವಿಧಾನಪರಿಷತ್ನಲ್ಲಿ ನಡೆದ ಅಹಿತಕರ ಘಟನೆ ಕುರಿತು ಪರಿಶೀಲಿಸಿ ವರದಿ ನೀಡಲು ಸಭಾಪತಿ ರಚಿಸಿದ ಸದನ ಸಮಿತಿಗೆ ಬಿಜೆಪಿ ಸದಸ್ಯರಾದ ಎಚ್. ವಿಶ್ವನಾಥ್ ಮತ್ತು ಎಸ್.ವಿ. ಸಂಕನೂರು ರಾಜೀನಾಮೆ ನೀಡಿದ್ದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ರಮೇಶ್, ‘ಸತ್ಯ ತಿಳಿಯುವ ಮುನ್ನವೇ ಬಿಜೆಪಿ ಶಸ್ತ್ರತ್ಯಾಗ ಮಾಡಿದೆ’ ಎಂದು ಟೀಕಿಸಿದರು.</p>.<p>‘ಸದನ ಸಮಿತಿಗೆ ನೇಮಕಗೊಂಡಿದ್ದ ಇಬ್ಬರು ಬಿಜೆಪಿ ಸದಸ್ಯರು ರಾಜೀನಾಮೆ ನೀಡಿದ್ದು ಏಕೆ’ ಎಂದು ಪ್ರಶ್ನಿಸಿದ ಅವರು, ‘ಘಟನೆ ಬಗ್ಗೆ ಜನರಿಗೆ ಸತ್ಯ ತಿಳಿಸಬೇಕು. ಈ ಕಾರಣಕ್ಕೆ ಸದನ ಸಮಿತಿ ರಚಿಸಲಾಗಿದೆ. ಆದರೆ, ಬಿಜೆಪಿ ಸದಸ್ಯರು ಸಮಿತಿಯಿಂದ ಹೊರ ನಡೆದಿರುವುದು ಸರಿಯಾದ ನಡೆಯಲ್ಲ’ ಎಂದರು.</p>.<p>‘ಸದನ ಸಮಿತಿ ಬಿಟ್ಟು ಬೇರೆ ಸಮಿತಿಗಳನ್ನು ರಚಿಸಲು ಅವಕಾಶವಿಲ್ಲ. ಈ ಬಗ್ಗೆ ಕೋರ್ಟ್ ಕೂಡ ಸ್ಪಷ್ಟವಾಗಿ ಹೇಳಿದೆ. ಸದನದಲ್ಲಿ ನಡೆದ ಅಹಿತಕರ ಘಟನೆಯ ಸರಿ, ತಪ್ಪು ಸದನದಲ್ಲೇ ತೀರ್ಮಾನ ಆಗಬೇಕು. ಬಿಜೆಪಿ ಸದಸ್ಯರು ಸದನ ಸಮಿತಿಗೆ ಗೌರವ ಕೊಡುವ ಬದಲು ಓಡಿ ಹೋಗಿದ್ದಾರೆ’ ಎಂದರು.</p>.<p>‘ಈ ವಿಷಯದಲ್ಲಿ ಆಯನೂರು ಮಂಜುನಾಥ್ ಸೇರಿದಂತೆ ಬಿಜೆಪಿ ಸದಸ್ಯರ ವಾದಕ್ಕೆ ಬೆಲೆ ಇಲ್ಲ’ ಎಂದೂ ರಮೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಿಧಾನಪರಿಷತ್ತಿನಲ್ಲಿ ನಡೆದ ಅಹಿತಕರ ಘಟನೆ ವೇಳೆ ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದಲೇ ಬಿಜೆಪಿ ಸದಸ್ಯರು ಸದನ ಸಮಿತಿಗೆ ರಾಜೀನಾಮೆ ನೀಡಿರುವ ಅನುಮಾನವಿದೆ’ ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಪಿ.ಆರ್. ರಮೇಶ್ ಹೇಳಿದರು.</p>.<p>ಡಿ. 15ರಂದು ವಿಧಾನಪರಿಷತ್ನಲ್ಲಿ ನಡೆದ ಅಹಿತಕರ ಘಟನೆ ಕುರಿತು ಪರಿಶೀಲಿಸಿ ವರದಿ ನೀಡಲು ಸಭಾಪತಿ ರಚಿಸಿದ ಸದನ ಸಮಿತಿಗೆ ಬಿಜೆಪಿ ಸದಸ್ಯರಾದ ಎಚ್. ವಿಶ್ವನಾಥ್ ಮತ್ತು ಎಸ್.ವಿ. ಸಂಕನೂರು ರಾಜೀನಾಮೆ ನೀಡಿದ್ದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ರಮೇಶ್, ‘ಸತ್ಯ ತಿಳಿಯುವ ಮುನ್ನವೇ ಬಿಜೆಪಿ ಶಸ್ತ್ರತ್ಯಾಗ ಮಾಡಿದೆ’ ಎಂದು ಟೀಕಿಸಿದರು.</p>.<p>‘ಸದನ ಸಮಿತಿಗೆ ನೇಮಕಗೊಂಡಿದ್ದ ಇಬ್ಬರು ಬಿಜೆಪಿ ಸದಸ್ಯರು ರಾಜೀನಾಮೆ ನೀಡಿದ್ದು ಏಕೆ’ ಎಂದು ಪ್ರಶ್ನಿಸಿದ ಅವರು, ‘ಘಟನೆ ಬಗ್ಗೆ ಜನರಿಗೆ ಸತ್ಯ ತಿಳಿಸಬೇಕು. ಈ ಕಾರಣಕ್ಕೆ ಸದನ ಸಮಿತಿ ರಚಿಸಲಾಗಿದೆ. ಆದರೆ, ಬಿಜೆಪಿ ಸದಸ್ಯರು ಸಮಿತಿಯಿಂದ ಹೊರ ನಡೆದಿರುವುದು ಸರಿಯಾದ ನಡೆಯಲ್ಲ’ ಎಂದರು.</p>.<p>‘ಸದನ ಸಮಿತಿ ಬಿಟ್ಟು ಬೇರೆ ಸಮಿತಿಗಳನ್ನು ರಚಿಸಲು ಅವಕಾಶವಿಲ್ಲ. ಈ ಬಗ್ಗೆ ಕೋರ್ಟ್ ಕೂಡ ಸ್ಪಷ್ಟವಾಗಿ ಹೇಳಿದೆ. ಸದನದಲ್ಲಿ ನಡೆದ ಅಹಿತಕರ ಘಟನೆಯ ಸರಿ, ತಪ್ಪು ಸದನದಲ್ಲೇ ತೀರ್ಮಾನ ಆಗಬೇಕು. ಬಿಜೆಪಿ ಸದಸ್ಯರು ಸದನ ಸಮಿತಿಗೆ ಗೌರವ ಕೊಡುವ ಬದಲು ಓಡಿ ಹೋಗಿದ್ದಾರೆ’ ಎಂದರು.</p>.<p>‘ಈ ವಿಷಯದಲ್ಲಿ ಆಯನೂರು ಮಂಜುನಾಥ್ ಸೇರಿದಂತೆ ಬಿಜೆಪಿ ಸದಸ್ಯರ ವಾದಕ್ಕೆ ಬೆಲೆ ಇಲ್ಲ’ ಎಂದೂ ರಮೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>