<p><strong>ಬೆಂಗಳೂರು:</strong> ಹಿರಿಯ ಚಿತ್ರ ಕಲಾವಿದೆ ಪ್ರಭಾ ಮಲ್ಲೇಶ್ ಅವರ ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳಿರುವ 'ರೂಟೆಡ್ ಇನ್ ಗೋಲ್ಡ್' ಪುಸ್ತಕವು ಜ.25ರಂದು ಬಿಡುಗಡೆಯಾಗಲಿದೆ. </p><p>ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ತಾಜ್ ಹೋಟೆಲ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದೆ. </p><p>ಮೈಸೂರು ಸಾಂಪ್ರದಾಯಿಕ ಚಿತ್ರಕಲೆಯಲ್ಲಿ ತಮ್ಮದೇ ಆದ ವಿಭಿನ್ನ ಬಗೆಯ ವಿನ್ಯಾಸದ ವರ್ಣ ರಂಜಿತ ಚಿತ್ರಗಳನ್ನು ಬಿಡಿಸುವ ಮೂಲಕ ಪ್ರಭಾ ಮಲ್ಲೇಶ್ ಅವರು ಗುರುತಿಸಿಕೊಂಡಿದ್ದಾರೆ. ಇವರು ಹಲವಾರು ಚಿತ್ರಕಲಾ ಪ್ರದರ್ಶನವನ್ನುಕೂಡ ಮಾಡಿದ್ದಾರೆ. </p>.<p>ಪ್ರಭಾ ಮಲ್ಲೇಶ್ ಅವರು ಸುಮಾರು 600ಕ್ಕಿಂತಲೂ ಹೆಚ್ಚು ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳನ್ನು ರಚಿಸಿದ್ದಾರೆ. ಅದರಲ್ಲಿ 130 ಚಿತ್ರಗಳನ್ನು ಆಯ್ಕೆ ಮಾಡಿ 150 ಪುಟಗಳಿರುವ ಪುಸ್ತಕವನ್ನು ಮಾಡಲಾಗಿದೆ. </p><p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಚಿತ್ರ ಕಲಾವಿದ ಚಂದ್ರನಾಥ್ ಆಚಾರ್ಯ, ಚಿರಂಜೀವಿ ಸಿಂಗ್, ಲಕ್ಷ್ಮಿ ಗೋಪಾಲಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿರಿಯ ಚಿತ್ರ ಕಲಾವಿದೆ ಪ್ರಭಾ ಮಲ್ಲೇಶ್ ಅವರ ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳಿರುವ 'ರೂಟೆಡ್ ಇನ್ ಗೋಲ್ಡ್' ಪುಸ್ತಕವು ಜ.25ರಂದು ಬಿಡುಗಡೆಯಾಗಲಿದೆ. </p><p>ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ತಾಜ್ ಹೋಟೆಲ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೊಂಡಿದೆ. </p><p>ಮೈಸೂರು ಸಾಂಪ್ರದಾಯಿಕ ಚಿತ್ರಕಲೆಯಲ್ಲಿ ತಮ್ಮದೇ ಆದ ವಿಭಿನ್ನ ಬಗೆಯ ವಿನ್ಯಾಸದ ವರ್ಣ ರಂಜಿತ ಚಿತ್ರಗಳನ್ನು ಬಿಡಿಸುವ ಮೂಲಕ ಪ್ರಭಾ ಮಲ್ಲೇಶ್ ಅವರು ಗುರುತಿಸಿಕೊಂಡಿದ್ದಾರೆ. ಇವರು ಹಲವಾರು ಚಿತ್ರಕಲಾ ಪ್ರದರ್ಶನವನ್ನುಕೂಡ ಮಾಡಿದ್ದಾರೆ. </p>.<p>ಪ್ರಭಾ ಮಲ್ಲೇಶ್ ಅವರು ಸುಮಾರು 600ಕ್ಕಿಂತಲೂ ಹೆಚ್ಚು ಮೈಸೂರು ಸಂಪ್ರದಾಯಿಕ ಶೈಲಿಯ ಕಲಾಕೃತಿಗಳನ್ನು ರಚಿಸಿದ್ದಾರೆ. ಅದರಲ್ಲಿ 130 ಚಿತ್ರಗಳನ್ನು ಆಯ್ಕೆ ಮಾಡಿ 150 ಪುಟಗಳಿರುವ ಪುಸ್ತಕವನ್ನು ಮಾಡಲಾಗಿದೆ. </p><p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಚಿತ್ರ ಕಲಾವಿದ ಚಂದ್ರನಾಥ್ ಆಚಾರ್ಯ, ಚಿರಂಜೀವಿ ಸಿಂಗ್, ಲಕ್ಷ್ಮಿ ಗೋಪಾಲಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>