ಏನಿದು ದೂರು: ‘ಶುಕ್ರವಾರ (ಸೆ.20) ನೈಸ್ ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದಾಗ ಜೊತೆಗಿದ್ದ ಪವಿತ್ರ, ಕಾರಿನ ಸೀಟ್ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ್ದಾಳೆ. ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಆರು ತಿಂಗಳಿನಿಂದ ಆಕೆ ಬೇಡಿಕೆ ಇಟ್ಟಿದ್ದಾಳೆ. ಅದಕ್ಕೆ ಒಪ್ಪದ ಕಾರಣ ಈ ಕೃತ್ಯಕ್ಕೆ ಮುಂದಾಗಿದ್ದಾಳೆ’ ಎಂದು ರೆಡ್ಡಿ ಆರೋಪಿಸಿದ್ದಾರೆ.