ಅಲ್ಲದೆ, ಗೋಶಾಲೆಗಳಿಗೆ ರಿಯಾಯತಿ ದರದಲ್ಲಿ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು, ಪ್ರತಿ ಗೋವಿನ ನಿರ್ವಹಣೆಗೆ ದಿನಕ್ಕೆ ನೀಡುತ್ತಿರುವ ₹ 17.50 ಸಹಾಯಧನವನ್ನು ಹೆಚ್ಚಿಸಬೇಕು, 15 ದಿನಕ್ಕೆ ಎರಡು ಬಾರಿಯಾದರು ಪಶು ವೈದ್ಯರು ಗೋಶಾಲೆಗಳಿಗೆ ಭೇಟಿ ನೀಡಿ ಉಚಿತವಾಗಿ ಚಿಕಿತ್ಸೆ ನೀಡಬೇಕು, ಮೇವು ಕತ್ತರಿಸುವ ಯಂತ್ರವನ್ನು ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಒದಗಿಸಬೇಕು, ಗೋ ಅರ್ಕ, ಸಗಣಿ, ಅಗರಬತ್ತಿ ಸೇರಿದಂತೆ 20ಕ್ಕೂ ಹೆಚ್ಚು ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಬೇಕು, ಕೆಎಂಎಫ್ ಮಳಿಗೆಗಳಲ್ಲಿ ದೇಸಿ ಗೋ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದೂ ಸಚಿವರಲ್ಲಿ ಮನವಿ ಮಾಡಿದರು.