ಲೋಕಾಯುಕ್ತ ಕೋರ್ಟ್ನಿಂದ ಗುರುವಾರ ನಿರೀಕ್ಷಣಾ ಜಾಮೀನು ಪಡೆದ ಬಳಿಕ ಪ್ರಭುಶಂಕರ್ ಎಸಿಬಿ ಕಚೇರಿಗೆ ಬಂದರು. ಆದರೆ, ಅನಾರೋಗ್ಯ ಕಾರಣ ನೀಡಿ ಬೇಗನೆ ನಿರ್ಗಮಿಸಿದರು. ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಯಾರಿಂದಲೂ ತಾವು ಲಂಚ ಪಡೆದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಶನಿವಾರ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.