ಸಾಹಿತಿ ವೈ.ಬಿ.ಎಚ್. ಜಯದೇವ್ ಮಾತನಾಡಿ, ‘ಇದೊಂದು ಸ್ವಾಗತಾರ್ಹ ಬದಲಾವಣೆ. ಸಭೆ ಸಮಾರಂಭಗಳಲ್ಲಿ ಶಾಲು, ಹಾರ, ಪೇಟಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ಸಂಪ್ರದಾಯವು ನಿಜಕ್ಕೂ ಪುಸ್ತಕ ಸಂಸ್ಕೃತಿಯೇ ಸರಿ. ನಮ್ಮ ಕ್ಷೇತ್ರದ ಶಾಸಕರು ತಮ್ಮ ಹುಟ್ಟಿದ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ವಿನೂತನ ಸಂಪ್ರದಾಯವು ನಿಜಕ್ಕೂ ಸ್ತುತ್ಯಾರ್ಹ’ ಎಂದರು.