<p><strong>ಪೀಣ್ಯ ದಾಸರಹಳ್ಳಿ</strong>: ಶುಭ ಸಮಾರಂಭಗಳಲ್ಲಿ ಒಳ್ಳೆಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿ ಪುಸ್ತಕ ಸಂಸ್ಕೃತಿ ಬೆಳೆಸಲು ಪ್ರೋತ್ಸಾಹಿಸಬೇಕು. ಇದರಿಂದ ಓದುವ ಹವ್ಯಾಸ ಬೆಳೆಸುವ ಆದರ್ಶ ಕಾರ್ಯ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಬಾಗಲಗುಂಟೆಯಲ್ಲಿ ನಡೆದ ‘ಅಭಿಮಾನೋತ್ಸವ’ದಲ್ಲಿ ನೂತನ ವರ್ಷ 2024ರ ‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಸಂಘ–ಸಂಸ್ಥೆಗಳು, ಗಣ್ಯರು, ಸಾಹಿತಿಗಳು, ಅಭಿಮಾನಿಗಳು ಆಗಮಿಸಿ ಪುಸ್ತಕಗಳನ್ನು ನೀಡಿ ಶುಭ ಕೋರಿದ್ದಾರೆ. ಈ ಪುಸ್ತಕಗಳನ್ನು ನಾನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡುವ ಮೂಲಕ ಪುಸ್ತಕ ಪ್ರೀತಿಯನ್ನು ಬೆಳೆಸಲು ನೆರವಾಗುತ್ತೇನೆ’ ಎಂದರು.</p>.<p>ಸಾಹಿತಿ ವೈ.ಬಿ.ಎಚ್. ಜಯದೇವ್ ಮಾತನಾಡಿ, ‘ಇದೊಂದು ಸ್ವಾಗತಾರ್ಹ ಬದಲಾವಣೆ. ಸಭೆ ಸಮಾರಂಭಗಳಲ್ಲಿ ಶಾಲು, ಹಾರ, ಪೇಟಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ಸಂಪ್ರದಾಯವು ನಿಜಕ್ಕೂ ಪುಸ್ತಕ ಸಂಸ್ಕೃತಿಯೇ ಸರಿ. ನಮ್ಮ ಕ್ಷೇತ್ರದ ಶಾಸಕರು ತಮ್ಮ ಹುಟ್ಟಿದ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ವಿನೂತನ ಸಂಪ್ರದಾಯವು ನಿಜಕ್ಕೂ ಸ್ತುತ್ಯಾರ್ಹ’ ಎಂದರು.</p>.<p>ಕತೆಗಾರ ಕಂನಾಡಿಗಾ ನಾರಾಯಣ ಮಾತನಾಡಿ, ‘ಜನಪ್ರತಿನಿಧಿಗಳು ತಮ್ಮ ಜನುಮದಿನ, ಶುಭ ಸಮಾರಂಭಗಳಲ್ಲಿ ಈ ರೀತಿ ಪುಸ್ತಕ ಉಡುಗೊರೆಯಾಗಿ ಪಡೆದರೆ ಸಾಹಿತಿಗಳು ಮತ್ತು ಪ್ರಕಾಶಕರಿಗೆ ಪ್ರೋತ್ಸಾಹಿದಂತಾಗುತ್ತದೆ’ ಎಂದರು.</p>.<p>ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ್, ಭರತ್ ಸೌಂದರ್ಯ ನೇತೃತ್ವದಲ್ಲಿ ಸಪ್ತಗಿರಿ ಆಸ್ಪತ್ರೆಯಲ್ಲಿ ಶಾಸಕ ಮುನಿರಾಜು ಅವರು ಹಣ್ಣು ಹಂಪಲು ವಿತರಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: ಶುಭ ಸಮಾರಂಭಗಳಲ್ಲಿ ಒಳ್ಳೆಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿ ಪುಸ್ತಕ ಸಂಸ್ಕೃತಿ ಬೆಳೆಸಲು ಪ್ರೋತ್ಸಾಹಿಸಬೇಕು. ಇದರಿಂದ ಓದುವ ಹವ್ಯಾಸ ಬೆಳೆಸುವ ಆದರ್ಶ ಕಾರ್ಯ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.</p>.<p>ಬಾಗಲಗುಂಟೆಯಲ್ಲಿ ನಡೆದ ‘ಅಭಿಮಾನೋತ್ಸವ’ದಲ್ಲಿ ನೂತನ ವರ್ಷ 2024ರ ‘ಪ್ರಜಾವಾಣಿ’ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಸಂಘ–ಸಂಸ್ಥೆಗಳು, ಗಣ್ಯರು, ಸಾಹಿತಿಗಳು, ಅಭಿಮಾನಿಗಳು ಆಗಮಿಸಿ ಪುಸ್ತಕಗಳನ್ನು ನೀಡಿ ಶುಭ ಕೋರಿದ್ದಾರೆ. ಈ ಪುಸ್ತಕಗಳನ್ನು ನಾನು ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡುವ ಮೂಲಕ ಪುಸ್ತಕ ಪ್ರೀತಿಯನ್ನು ಬೆಳೆಸಲು ನೆರವಾಗುತ್ತೇನೆ’ ಎಂದರು.</p>.<p>ಸಾಹಿತಿ ವೈ.ಬಿ.ಎಚ್. ಜಯದೇವ್ ಮಾತನಾಡಿ, ‘ಇದೊಂದು ಸ್ವಾಗತಾರ್ಹ ಬದಲಾವಣೆ. ಸಭೆ ಸಮಾರಂಭಗಳಲ್ಲಿ ಶಾಲು, ಹಾರ, ಪೇಟಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ಸಂಪ್ರದಾಯವು ನಿಜಕ್ಕೂ ಪುಸ್ತಕ ಸಂಸ್ಕೃತಿಯೇ ಸರಿ. ನಮ್ಮ ಕ್ಷೇತ್ರದ ಶಾಸಕರು ತಮ್ಮ ಹುಟ್ಟಿದ ಹಬ್ಬದ ಆಚರಣೆಯ ಸಂದರ್ಭದಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ಪಡೆಯುವ ಈ ವಿನೂತನ ಸಂಪ್ರದಾಯವು ನಿಜಕ್ಕೂ ಸ್ತುತ್ಯಾರ್ಹ’ ಎಂದರು.</p>.<p>ಕತೆಗಾರ ಕಂನಾಡಿಗಾ ನಾರಾಯಣ ಮಾತನಾಡಿ, ‘ಜನಪ್ರತಿನಿಧಿಗಳು ತಮ್ಮ ಜನುಮದಿನ, ಶುಭ ಸಮಾರಂಭಗಳಲ್ಲಿ ಈ ರೀತಿ ಪುಸ್ತಕ ಉಡುಗೊರೆಯಾಗಿ ಪಡೆದರೆ ಸಾಹಿತಿಗಳು ಮತ್ತು ಪ್ರಕಾಶಕರಿಗೆ ಪ್ರೋತ್ಸಾಹಿದಂತಾಗುತ್ತದೆ’ ಎಂದರು.</p>.<p>ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ್, ಭರತ್ ಸೌಂದರ್ಯ ನೇತೃತ್ವದಲ್ಲಿ ಸಪ್ತಗಿರಿ ಆಸ್ಪತ್ರೆಯಲ್ಲಿ ಶಾಸಕ ಮುನಿರಾಜು ಅವರು ಹಣ್ಣು ಹಂಪಲು ವಿತರಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>