ಬೆಂಗಳೂರು: ನಗರದ ಅರಮನೆ ಮೈದಾನ ಸಮೀಪದ ಜಯಮಹಲ್ ಹೋಟೆಲ್ ಬಳಿ ಶನಿವಾರ 11ನೇ ವರ್ಷದ ಪ್ರಜಾವಾಣಿ-ಡೆಕ್ಕನ್ ಹೆರಾಲ್ಡ್ ವತಿಯಿಂದ ಎಡ್ಯುವರ್ಸ್ ಜ್ಞಾನದೇಗುಲ ಆರಂಭವಾಯಿತು.
ಹಿರಿಯ ಐಎಎಸ್ ಆಧಿಕಾರಿ, ರಾಜ್ಯದ ನಿವೃತ್ತ ಪ್ರಿನ್ಸ್ ಪಲ್ ಕಾರ್ಯದರ್ಶಿ ಎಂ.ಎನ್.ವಿದ್ಯಾಶಂಕರ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಇರುವ ವಿವಿಧ ಕಲಿಕಾ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಕಾಮೆಡ್ ಕೆ ಬಗ್ಗೆ ಪ್ರೊ.ಶಾಂತಾರಾಂ ಹಾಗೂ ಸಿಇಟಿ ಬಗ್ಗೆ ಕೆಇಎ ಪಿಆರ್ ಒ ಎ.ಎಸ್.ರವಿ ಮಾಹಿತಿ ನೀಡಿದರು. ನೂರಾರು ವಿದ್ಯಾರ್ಥಿಗಳು, ಅವರ ಪೋಷಕರು ಬಂದಿದ್ದಾರೆ.
100ಕ್ಕೂ ಅಧಿಕ ಮಳಿಗೆಗಳು ವಿವಿಧ ಕಾಲೇಜುಗಳಲ್ಲಿನ ಕಲಿಕಾ ಅವಕಾಶಗಳನ್ನು ತಿಳಿಸಿಕೊಡುತ್ತಿವೆ. ಭಾನುವಾರ ಸಂಜೆಯವರೆಗೆ ಇದು ಮುಂದುವರಿಯಲಿದೆ.ವಿವಿಧ ವಿಷಯಗಳ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ.