ಬೆಂಗಳೂರು: ‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವವರು ಬೆಂಗಳೂರು, ದೆಹಲಿಯಂತಹ ಮಹಾನಗರಗಳಿಗೆ ತೆರಳಿ, ಲಕ್ಷಾಂತರ ರೂಪಾಯಿ ವ್ಯಯಿಸಿ ತರಬೇತಿ ಪಡೆಯುತ್ತಾರೆ. ಆದರೆ, ‘ಪ್ರಜಾವಾಣಿ‘ಯಲ್ಲಿ ಪ್ರತಿ ಗುರುವಾರ ಪ್ರಕಟವಾಗುತ್ತಿರುವ ಸ್ಪರ್ಧಾವಾಣಿ ಓದಿದರೆ, ಸಾಕಷ್ಟು ಜ್ಞಾನಾರ್ಜನೆಯಾಗುವುದಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನೂ ಸಾಧಿಸಬಹುದು’ ಎಂದು ಕುಂಬಳಗೋಡಿನ ವಿವೇಕಾನಂದ ತಾಂತ್ರಿಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಇಂದಿರಾ ಗೋಪಾಲಕೃಷ್ಣ ಹೇಳಿದರು.