ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಪ್ರಜಾವಾಣಿ’ ವತಿಯಿಂದ ಡಿ. 16ರಂದು ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.
ಪರಿಶ್ರಮ ಪಿಯು ಕಾಲೇಜು ಹಾಗೂ ಭೀಮಾ ಗೋಲ್ಡ್ ಸಹಯೋಗದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಜಯನಗರ 4ನೇ ಹಂತದ ವಿವೇಕ್ ಸಭಾಭವನದಲ್ಲಿ (ಯುವಕ ಸಂಘ) ಸ್ಪರ್ಧೆ ನಡೆಯಲಿದೆ.
ಬೆಂಗಳೂರು ವಲಯದ ಸ್ಪರ್ಧೆಯಲ್ಲಿ 8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು–ವಿದ್ಯಾರ್ಥಿನಿಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಆಸಕ್ತರು, ಶಾಲೆಯ ಸಮ್ಮತಿಯೊಂದಿಗೆ ಆನ್ಲೈನ್ ಮೂಲಕ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು.