ಬೆಂಗಳೂರು: ವಿಶ್ವಜಲ ದಿನ ಹಾಗೂ ಪ್ರಜಾವಾಣಿ@75 ಅಂಗವಾಗಿ ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ವತಿಯಿಂದ ಏ.1ರ ಶನಿವಾರ ಬೆಳಿಗ್ಗೆ 6.30ಕ್ಕೆ ‘ನೀರಿಗಾಗಿ ನಡಿಗೆ’ ಆಯೋಜಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಪ್ರತಾಪ ರೆಡ್ಡಿ, ಸಂಚಾರ ವಿಭಾಗದ ವಿಶೇಷ ಕಮಿಷನರ್ ಎಂ.ಎ. ಸಲೀಂ ಹಾಗೂ ಚಲನಚಿತ್ರ ನಟ ರಿಷಿ ಅವರು ಮಹಾತ್ಮಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಲ್ಲಿ ಆರಂಭವಾಗುವ ವಾಕಥಾನ್ಗೆ ಚಾಲನೆ ನೀಡಲಿದ್ದಾರೆ.
ಕಬ್ಬನ್ ಪಾರ್ಕ್ನ ಪ್ರೆಸ್ಕ್ಲಬ್ ಆವರಣದಲ್ಲಿ ವಾಕಥಾನ್ ಮುಕ್ತಾಯಗೊಳ್ಳಲಿದ್ದು, ಪಿಇಎಸ್ ವಿವಿ ಕುಲಪತಿ ಎಂ.ಆರ್. ದೊರೆಸ್ವಾಮಿ, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಪ್ರಮಾಣಪತ್ರ ವಿತರಿಸಲಿದ್ದಾರೆ.