ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರದ ಕುರಿತ ಆರೋಪದ ಬಗ್ಗೆ ಕೇಳಿದಾಗ, ‘ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಎಲ್ಲೆಲ್ಲಿ ಸುತ್ತಿ ಎಲ್ಲಿಗೆ ಬಂದು ನಿಲ್ಲುತ್ತೆ ನೋಡೋಣ. ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಸುಮ್ಮನೆ ಆರೋಪ ಮಾಡಿದರೆ ರಾಜೀನಾಮೆ ಕೊಡಲು ಆಗುತ್ತಾ? ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಹೇಳಿದರು.