<p><strong>ಬೆಂಗಳೂರು:</strong> ‘ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರೀಯ ಸಮಸ್ಯೆಯಲ್ಲ. ಅದು ವೈಯಕ್ತಿಕವಾಗಿ ಆಗಿದೆ. ಪೊಲೀಸರು ತನಿಖೆ ನಡೆಸುತ್ತಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ವೈಯಕ್ತಿಕ ಪ್ರಕರಣವನ್ನು ಜೇಮ್ಸ್ ಬಾಂಡ್ ರೀತಿ ಹಿಗ್ಗಿಸೋಕೆ ಆಗುವುದಿಲ್ಲ. ಅದನ್ನೇ ಕೇಂದ್ರೀಕರಿಸಲು ಆಗುವುದಿಲ್ಲ. ರಾಜ್ಯದಲ್ಲಿ ಬೇರೆ ಬೇರೆ ಸಮಸ್ಯೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಇದೆ. ಆ ಕಡೆ ಗಮನಹರಿಸಬೇಕು’ ಎಂದರು.</p>.<p>ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರದ ಕುರಿತ ಆರೋಪದ ಬಗ್ಗೆ ಕೇಳಿದಾಗ, ‘ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಎಲ್ಲೆಲ್ಲಿ ಸುತ್ತಿ ಎಲ್ಲಿಗೆ ಬಂದು ನಿಲ್ಲುತ್ತೆ ನೋಡೋಣ. ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಸುಮ್ಮನೆ ಆರೋಪ ಮಾಡಿದರೆ ರಾಜೀನಾಮೆ ಕೊಡಲು ಆಗುತ್ತಾ? ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರೀಯ ಸಮಸ್ಯೆಯಲ್ಲ. ಅದು ವೈಯಕ್ತಿಕವಾಗಿ ಆಗಿದೆ. ಪೊಲೀಸರು ತನಿಖೆ ನಡೆಸುತ್ತಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ವೈಯಕ್ತಿಕ ಪ್ರಕರಣವನ್ನು ಜೇಮ್ಸ್ ಬಾಂಡ್ ರೀತಿ ಹಿಗ್ಗಿಸೋಕೆ ಆಗುವುದಿಲ್ಲ. ಅದನ್ನೇ ಕೇಂದ್ರೀಕರಿಸಲು ಆಗುವುದಿಲ್ಲ. ರಾಜ್ಯದಲ್ಲಿ ಬೇರೆ ಬೇರೆ ಸಮಸ್ಯೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಇದೆ. ಆ ಕಡೆ ಗಮನಹರಿಸಬೇಕು’ ಎಂದರು.</p>.<p>ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರದ ಕುರಿತ ಆರೋಪದ ಬಗ್ಗೆ ಕೇಳಿದಾಗ, ‘ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಎಲ್ಲೆಲ್ಲಿ ಸುತ್ತಿ ಎಲ್ಲಿಗೆ ಬಂದು ನಿಲ್ಲುತ್ತೆ ನೋಡೋಣ. ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಸುಮ್ಮನೆ ಆರೋಪ ಮಾಡಿದರೆ ರಾಜೀನಾಮೆ ಕೊಡಲು ಆಗುತ್ತಾ? ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>