ದೂರುದಾರ ಮಹಿಳೆಯರ ಗೌಪ್ಯತೆ ಕಾಪಾಡಿ, ಅವರಿಗೆ ಆಪ್ತ ಸಮಾಲೋಚನೆ, ಕಾನೂನು ಸಲಹೆ, ರಕ್ಷಣೆ, ಪುನರ್ವಸತಿ ಮತ್ತು ಪರಿಹಾರ ಒದಗಿಸಬೇಕು. ನೊಂದ ಮಹಿಳೆಯರ ಫೋಟೊ, ವೀಡಿಯೋಗಳನ್ನು ಬಳಸದಂತೆ ಮಾಧ್ಯಮಗಳಿಗೆ ಸೂಚಿಸಬೇಕು. ತಪ್ಪಿದ್ದಲ್ಲಿ ಅಂತಹ ಮಾಧ್ಯಮ ಅಥವಾ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನಿಂದ ಪೀಡನೆಗೆ ಒಳಗಾದ ಯುವತಿಯರನ್ನು ಹಾಸ್ಯಕ್ಕೆ ಬಳಸುವುದು, ಸಂತ್ರಸ್ತ ಮಹಿಳೆಯರ ಹೆಸರಿನಲ್ಲಿ ಜೋಕುಗಳನ್ನು ಹರಿಬಿಡುವ ಕಿಡಿಗೇಡಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಸಮುದಾಯ ಬೆಂಗಳೂರು ಕಾರ್ಯದರ್ಶಿ ಕಾವ್ಯ ಅಚ್ಯುತ್, ಸಮುದಾಯ ಕರ್ನಾಟಕ ಕಾರ್ಯದರ್ಶಿ ಮನೋಜ್ ವಾಮಂಜೂರು ಆಗ್ರಹಿಸಿದರು.