ಹಿರಿಯ ಕಾರ್ಮಿಕ ಮುಖಂಡ ಅಮಾನುಲ್ಲಾ ಖಾನ್, ‘ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ 14ರಷ್ಟಿದೆ. ಆದರೆ, ರಾಜಕೀಯ ಪ್ರಾತಿನಿಧ್ಯ ಶೇ 3ನ್ನೂ ಮೀರಿಲ್ಲ. ಉದ್ಯೋಗದಲ್ಲೂ ಶೇ 3ರಷ್ಟು ಪ್ರಾತಿನಿಧ್ಯವೂ ಸಿಕ್ಕಿಲ್ಲ. ಡಾ.ರಾಜೇಂದ್ರ ಸಾಚಾರ್ ಸಮಿತಿ ಹಾಗೂ ರಂಗನಾಥ ಮಿಶ್ರಾ ಸಮಿತಿಯ ಶಿಫಾರಸ್ಸುಗಳನ್ನು ಸರ್ಕಾರವು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿದರು.