ಸಂಪುಟದಲ್ಲಿ ಏಳು ಮಂದಿ ಲಿಂಗಾಯತರಿಗೆ ಅವಕಾಶ ಸಿಕ್ಕಿದೆ. ಇಬ್ಬರು ಮುಸ್ಲಿಮರಿಗೆ ಮಾತ್ರ ಸಚಿವ ಸ್ಥಾನ ದೊರಕಿದೆ. ಲಂಬಾಣಿ, ಉಪ್ಪಾರ, ಬಲಿಜಿಗ, ಯಾದವ ಸಮುದಾಯಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಈ ಎಲ್ಲ ಸಮುದಾಯದವರೂ ಶಿಸ್ತು ಮೀರದೆ ಬೇಡಿಕೆ ಮಂಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪಕ್ಷದ ಧೋರಣೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ಮಾತನಾಡಬಾರದು ಎಂದು ಆಗ್ರಹಿಸಿದ್ದಾರೆ.