<p><strong>ಕೆಂಗೇರಿ</strong>: ಬಾಹ್ಯಾಕಾಶ ವಿಜ್ಞಾನದ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯುವ ಸಮೂಹ ದೇಶದ ಅಭಿವೃದ್ಧಿಗೆ ಕಾಣಿಕೆ ನೀಡಬೇಕು ಎಂದು ಇಸ್ರೊ ಮಾಜಿ ಅಧ್ಯಕ್ಷ ಡಾ. ಎಸ್. ರಂಗರಾಜನ್ ಹೇಳಿದರು.</p>.<p>ಬಿಜಿಎಸ್ ಬಿ ಸ್ಕೂಲಿನ ಪ್ರಥಮ ಬಿಎಸ್ಸಿ, ಬಿಕಾಂ, ಬಿಸಿಎ ಹಾಗೂ ಬಿಬಿಎ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಬಾಹ್ಯಾಕಾಶ ವಿಜ್ಞಾನದ ವ್ಯಾಪ್ತಿ ವಿಸ್ತಾರವಾಗಿದೆ. ಉದ್ಯೋಗ ಸೃಜನೆ ಹಾಗೂ ಅಭಿವೃದ್ಧಿಗೆ ಪ್ರೇರಕ ಶಕ್ತಿಯಂತಿರುವ ಬಾಹ್ಯಕಾಶ ವಿಜ್ಞಾನ ಅವಕಾಶಗಳ ಆಗರವಾಗಿದೆ ಎಂದರು. </p>.<p>ಬಿಜಿಎಸ್ ಮತ್ತು ಎಸ್ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶನಾಥ ಸ್ವಾಮೀಜಿ ಮಾತನಾಡಿ, ‘ಬುದ್ಧ, ಬಸವಣ್ಣನ ಸಂದೇಶಗಳು ಸಮಾಜಕ್ಕೆ ಅಪಥ್ಯವಾಗಿವೆ. ಹೀಗಾಗಿಯೇ ಯುವ ಸಮುದಾಯದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ’ ಎಂದು ಬೇಸರ ವ್ಯಕ್ತ ಪಡಿಸಿದರು.</p>.<p>ಗೆಲುವು ಶ್ರಮಿಕನ ಸ್ವತ್ತು. ಪ್ರತಿಯೊಂದು ಸಾಧನೆಯ ಹಿಂದೆ ಅಪಾರ ಪರಿಶ್ರಮವಿರುತ್ತದೆ. ಕಾಲಹರಣ ಮಾಡಿದರೆ ಭವಿಷ್ಯದ ಜೀವನ ದುಸ್ತರವಾಗಲಿದೆ ಎಂದು ಎಚ್ಚರಿಸಿದರು.</p>.<p>ಕಾಗ್ನಿಝಂಟ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ವ್ಯವಸ್ಥಾಪಕಿ ಸುದರ್ಶನಿ ಪುಟ್ಟಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮನೋಬಲ ವೃದ್ಧಿಸಿಕೊಳ್ಳಬೇಕು. ನಿರಂತರ ಪ್ರಯತ್ನಕ್ಕೆ ಫಲ ನಿಶ್ಚಿತ ಎಂದರು.</p>.<p>ನಟಿ ಅನನ್ಯ ಅಮರ್, ಬಿಜಿಎಸ್ ಅಕಾಡೆಮಿಕ್ ಡೈರೆಕ್ಟರ್ ಡಾ. ಪುಟ್ಟರಾಜು, ಬಿಜಿಎಸ್ ಬಿ ಶಾಲೆಯ ಪ್ರಾಂಶುಪಾಲೆ ಮಮತಾ. ಜೆ. ರೂಪಿಕಾ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ಬಾಹ್ಯಾಕಾಶ ವಿಜ್ಞಾನದ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯುವ ಸಮೂಹ ದೇಶದ ಅಭಿವೃದ್ಧಿಗೆ ಕಾಣಿಕೆ ನೀಡಬೇಕು ಎಂದು ಇಸ್ರೊ ಮಾಜಿ ಅಧ್ಯಕ್ಷ ಡಾ. ಎಸ್. ರಂಗರಾಜನ್ ಹೇಳಿದರು.</p>.<p>ಬಿಜಿಎಸ್ ಬಿ ಸ್ಕೂಲಿನ ಪ್ರಥಮ ಬಿಎಸ್ಸಿ, ಬಿಕಾಂ, ಬಿಸಿಎ ಹಾಗೂ ಬಿಬಿಎ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಬಾಹ್ಯಾಕಾಶ ವಿಜ್ಞಾನದ ವ್ಯಾಪ್ತಿ ವಿಸ್ತಾರವಾಗಿದೆ. ಉದ್ಯೋಗ ಸೃಜನೆ ಹಾಗೂ ಅಭಿವೃದ್ಧಿಗೆ ಪ್ರೇರಕ ಶಕ್ತಿಯಂತಿರುವ ಬಾಹ್ಯಕಾಶ ವಿಜ್ಞಾನ ಅವಕಾಶಗಳ ಆಗರವಾಗಿದೆ ಎಂದರು. </p>.<p>ಬಿಜಿಎಸ್ ಮತ್ತು ಎಸ್ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶನಾಥ ಸ್ವಾಮೀಜಿ ಮಾತನಾಡಿ, ‘ಬುದ್ಧ, ಬಸವಣ್ಣನ ಸಂದೇಶಗಳು ಸಮಾಜಕ್ಕೆ ಅಪಥ್ಯವಾಗಿವೆ. ಹೀಗಾಗಿಯೇ ಯುವ ಸಮುದಾಯದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ’ ಎಂದು ಬೇಸರ ವ್ಯಕ್ತ ಪಡಿಸಿದರು.</p>.<p>ಗೆಲುವು ಶ್ರಮಿಕನ ಸ್ವತ್ತು. ಪ್ರತಿಯೊಂದು ಸಾಧನೆಯ ಹಿಂದೆ ಅಪಾರ ಪರಿಶ್ರಮವಿರುತ್ತದೆ. ಕಾಲಹರಣ ಮಾಡಿದರೆ ಭವಿಷ್ಯದ ಜೀವನ ದುಸ್ತರವಾಗಲಿದೆ ಎಂದು ಎಚ್ಚರಿಸಿದರು.</p>.<p>ಕಾಗ್ನಿಝಂಟ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ವ್ಯವಸ್ಥಾಪಕಿ ಸುದರ್ಶನಿ ಪುಟ್ಟಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮನೋಬಲ ವೃದ್ಧಿಸಿಕೊಳ್ಳಬೇಕು. ನಿರಂತರ ಪ್ರಯತ್ನಕ್ಕೆ ಫಲ ನಿಶ್ಚಿತ ಎಂದರು.</p>.<p>ನಟಿ ಅನನ್ಯ ಅಮರ್, ಬಿಜಿಎಸ್ ಅಕಾಡೆಮಿಕ್ ಡೈರೆಕ್ಟರ್ ಡಾ. ಪುಟ್ಟರಾಜು, ಬಿಜಿಎಸ್ ಬಿ ಶಾಲೆಯ ಪ್ರಾಂಶುಪಾಲೆ ಮಮತಾ. ಜೆ. ರೂಪಿಕಾ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>