<p>‘ಜಗತ್ತಿಗೇ ಮಾನವ ಸಂಪನ್ಮೂಲ ಪೂರೈಸಲು ಭಾರತ ಸಶಕ್ತ’ ‘ಭವಿಷ್ಯದಲ್ಲಿ ಜಗತ್ತಿಗೇ ಮಾನವ ಸಂಪನ್ಮೂಲ ನೀಡುವ ಸಾಮರ್ಥ್ಯ ಇರುವ ದೇಶ ಭಾರತ. ವಿದ್ಯಾಕ್ಷೇತ್ರಕ್ಕೆ ಹೊಸ ದಿಕ್ಸೂಚಿ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಜ್ಜಾಗಿದೆ’ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು.</p>.<p>ಕನಕಪುರ ರಸ್ತೆ ಬಳಿಯ ‘ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆ’ಯ ಉದ್ಘಾಟನೆ ಸಲುವಾಗಿ ವರ್ಚುವಲ್ ರೂಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>‘ಕರ್ನಾಟಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಕೇಂದ್ರವಾಗಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>‘ಆರ್ಥಿಕವಾಗಿ ಹಿಂದುಳಿದ ಹಾಗೂ ವಿಜ್ಞಾನದ ಬಗ್ಗೆ ಹೆಚ್ಚು ಒಲವು ಹೊಂದಿರುವ ಮಕ್ಕಳಿಗೆ ‘ಪ್ರಯೋಗ’ದಂತಹ ಲಾಭರಹಿತ ಶಿಕ್ಷಣ ಸಂಸ್ಥೆಗಳು ಒಂದು ಬಲವಾದ ತಳಪಾಯ ಒದಗಿಸುತ್ತವೆ. ವೈಜ್ಞಾನಿಕ ಆಸಕ್ತಿಯುಳ್ಳ ಮಕ್ಕಳಿಗೆ ಗುಣಮಟ್ಟದ ಹಾಗೂ ಪ್ರಯೋಗಾತ್ಮಕ ಶಿಕ್ಷಣ ಒದಗಿಸಲು ಇದು ಉತ್ತಮ ವೇದಿಕೆಯಾಗಲಿದೆ’ ಎಂದರು.</p>.<p>ಪ್ರಯೋಗ ಸಂಸ್ಥೆಯ ಸ್ಥಾಪಕ ಎಚ್.ಎಸ್.ನಾಗರಾಜ್, ‘ಈಗಿನ ಶಿಕ್ಷಣ ವ್ಯವಸ್ಥೆ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವುದರಲ್ಲಿ ಹಾಗೂ ಮೂಲ ತತ್ವಗಳನ್ನು ಅರ್ಥೈಸುವಲ್ಲಿ ವಿಫಲವಾಗಿವೆ. ಮಕ್ಕಳುಬಾಲ್ಯದಲ್ಲಿ ಕಲಿಯುವ ನೈಜ ಜೀವನದ ಕಲಿಕೆಗಳೇ ಅವರ ಭವಿಷ್ಯದ ಶಿಕ್ಷಣಕ್ಕೆ ಆಧಾರ. ಈ ವಿಧಾನದ ಕಲಿಕೆಯು ಅವರ ಜೀವನದ ದೃಷ್ಟಿಕೋನ ಹಾಗೂ ಸಾಮರ್ಥ್ಯಕ್ಕೆ ಅಡಿಪಾಯ’ ಎಂದರು.</p>.<p>ಕಾರ್ಯಕ್ರಮದಲ್ಲಿಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ,ಶಿಕ್ಷಣ ತಜ್ಞ ಎಂ.ಆರ್.ದೊರೆಸ್ವಾಮಿ,ಸಂಸದ ತೇಜಸ್ವಿ ಸೂರ್ಯ,ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಜಗತ್ತಿಗೇ ಮಾನವ ಸಂಪನ್ಮೂಲ ಪೂರೈಸಲು ಭಾರತ ಸಶಕ್ತ’ ‘ಭವಿಷ್ಯದಲ್ಲಿ ಜಗತ್ತಿಗೇ ಮಾನವ ಸಂಪನ್ಮೂಲ ನೀಡುವ ಸಾಮರ್ಥ್ಯ ಇರುವ ದೇಶ ಭಾರತ. ವಿದ್ಯಾಕ್ಷೇತ್ರಕ್ಕೆ ಹೊಸ ದಿಕ್ಸೂಚಿ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಜ್ಜಾಗಿದೆ’ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು.</p>.<p>ಕನಕಪುರ ರಸ್ತೆ ಬಳಿಯ ‘ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆ’ಯ ಉದ್ಘಾಟನೆ ಸಲುವಾಗಿ ವರ್ಚುವಲ್ ರೂಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>‘ಕರ್ನಾಟಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಕೇಂದ್ರವಾಗಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>‘ಆರ್ಥಿಕವಾಗಿ ಹಿಂದುಳಿದ ಹಾಗೂ ವಿಜ್ಞಾನದ ಬಗ್ಗೆ ಹೆಚ್ಚು ಒಲವು ಹೊಂದಿರುವ ಮಕ್ಕಳಿಗೆ ‘ಪ್ರಯೋಗ’ದಂತಹ ಲಾಭರಹಿತ ಶಿಕ್ಷಣ ಸಂಸ್ಥೆಗಳು ಒಂದು ಬಲವಾದ ತಳಪಾಯ ಒದಗಿಸುತ್ತವೆ. ವೈಜ್ಞಾನಿಕ ಆಸಕ್ತಿಯುಳ್ಳ ಮಕ್ಕಳಿಗೆ ಗುಣಮಟ್ಟದ ಹಾಗೂ ಪ್ರಯೋಗಾತ್ಮಕ ಶಿಕ್ಷಣ ಒದಗಿಸಲು ಇದು ಉತ್ತಮ ವೇದಿಕೆಯಾಗಲಿದೆ’ ಎಂದರು.</p>.<p>ಪ್ರಯೋಗ ಸಂಸ್ಥೆಯ ಸ್ಥಾಪಕ ಎಚ್.ಎಸ್.ನಾಗರಾಜ್, ‘ಈಗಿನ ಶಿಕ್ಷಣ ವ್ಯವಸ್ಥೆ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸುವುದರಲ್ಲಿ ಹಾಗೂ ಮೂಲ ತತ್ವಗಳನ್ನು ಅರ್ಥೈಸುವಲ್ಲಿ ವಿಫಲವಾಗಿವೆ. ಮಕ್ಕಳುಬಾಲ್ಯದಲ್ಲಿ ಕಲಿಯುವ ನೈಜ ಜೀವನದ ಕಲಿಕೆಗಳೇ ಅವರ ಭವಿಷ್ಯದ ಶಿಕ್ಷಣಕ್ಕೆ ಆಧಾರ. ಈ ವಿಧಾನದ ಕಲಿಕೆಯು ಅವರ ಜೀವನದ ದೃಷ್ಟಿಕೋನ ಹಾಗೂ ಸಾಮರ್ಥ್ಯಕ್ಕೆ ಅಡಿಪಾಯ’ ಎಂದರು.</p>.<p>ಕಾರ್ಯಕ್ರಮದಲ್ಲಿಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ,ಶಿಕ್ಷಣ ತಜ್ಞ ಎಂ.ಆರ್.ದೊರೆಸ್ವಾಮಿ,ಸಂಸದ ತೇಜಸ್ವಿ ಸೂರ್ಯ,ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>