ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023: ಪೂರ್ವ ಸಿದ್ಧತೆ ಸಭೆ

Last Updated 13 ಜನವರಿ 2023, 16:22 IST
ಅಕ್ಷರ ಗಾತ್ರ

ಬೆಂಗಳೂರು: ಸೂಕ್ಷ್ಮ ಪ್ರದೇಶಗಳ ಮ್ಯಾಪಿಂಗ್‌ಗಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಸೂಚಿಸಿದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಆದೇಶಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳಬೇಕಾದ ಕ್ರಮ, ಸೂಕ್ಷ್ಮ ವಿಧಾನ ಸಭಾ ಕ್ಷೇತ್ರಗಳು ಹಾಗೂ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಚರ್ಚಿಸಲಾಯಿತು.

ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ದಯಾನಂದ್ (ಬೆಂಗಳೂರು ನಗರ), ಡಾ. ಹರೀಶ್ ಕುಮಾರ್ (ಕೇಂದ್ರ), ವೆಂಕಟಾ ಚಲಪತಿ (ಉತ್ತರ), ಜಗದೀಶ್ ನಾಯ್ಕ್ (ದಕ್ಷಿಣ), ಜಂಟಿ ಪೊಲೀಸ್ ಆಯುಕ್ತ ಶರಣಪ್ಪ, ಉಪ ಪೊಲೀಸ್ ಆಯುಕ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT