ಎಂ.ಜಿ.ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕಬ್ಬಿನ ಜ್ಯೂಸ್ ಮಳಿಗೆಗೂ ಇದೇ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಚಾಲನೆ ನೀಡಿದರು. ಈ ರೀತಿಯ ಮಳಿಗೆಗಳನ್ನು ನಾಡಪ್ರಭು ಕೆಂಪೇಗೌಡ ನಿಲ್ದಾಣ, ನಾಗಸಂದ್ರ, ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ ಮತ್ತು ಚಿಕ್ಕಪೇಟೆ ನಿಲ್ದಾಣಗಳಲ್ಲಿ ತೆರೆಯಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.